ಮಂಗಳೂರು: ವೈದ್ಯನಾಥ ಫ್ರೆಂಡ್ಸ್ ಹಾಗೂ ಟೀಮ್ ಛತ್ರಪತಿ  ಉಳ್ಳಾಲ ಬೈಲ್  – ಯುವಕರ ಹುಲಿವೇಷದ ದೇಣಿಗೆಯಿಂದ ಕ್ಯಾನ್ಸರ್ ಪೀಡಿತರಿಗೆ ನೆರವು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ವೈದ್ಯನಾಥ ಫ್ರೆಂಡ್ಸ್ ಹಾಗೂ ಟೀಮ್ ಛತ್ರಪತಿ  ಉಳ್ಳಾಲ ಬೈಲ್  – ಹುಲಿವೇಷದ ದೇಣಿಗೆಯಿಂದ ಕ್ಯಾನ್ಸರ್ ಪೀಡಿತರಿಗೆ ನೆರವು

ಮಂಗಳೂರು: ಕರಾವಳಿಯ ಪ್ರಸಿದ್ಧ ಜಾನಪದ ಕಲೆ ಹುಲಿವೇಷ  ಅದು ಮೈಮನ ನವಿರೇಳಿಸುವಂತಹ ಕುಣಿತದ ಜೊತೆಗೆ ಜನತೆಗೆ ಮನರಂಜನೆ ಒದಗಿಸುತ್ತದೆ. ಇಷ್ಟು ಮಾತ್ರ ಅಲ್ಲ ಮಂಗಳೂರಿನ ಯುವಕರ ಹುಲಿವೇಷದ ತಂಡ ಮನೋರಂಜನೆಯ ಜೊತೆಗೆ ಹಲವು ಕುಟುಂಬಗಳಿಗೆ ಬೆಳಕು ನೀಡುವ ಪ್ರಯತ್ನ ಮಾಡಿದೆ. ಇತ್ತೀಚೆಗೆ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್  ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.

ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಬರ್ತಾ ಇದ್ದಂತೆ ಶುರು ಆಗೋದು ನಾಡ ಹುಲಿಗಳ ಅಬ್ಬರ. ಇಲ್ಲಿ ಹುಲಿವೇಷ ಇಲ್ಲದೆ ಯಾವುದೇ ಹಬ್ಬವೂ ನಡೆಯುವುದು ಕಡಿಮೆ. ಹುಲಿ ವೇಷ ಹಾಕುವವರು ಸಮಾಜಮುಖಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳೂರು ಹೊರವಲಯದ ತೊಕ್ಕೊಟ್ಟುವಿನಲ್ಲಿ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ದೇಣಿಗೆ ರೂಪದಲ್ಲಿ ಬಂದ 60ಸಾವಿರ ಹಣವನ್ನು ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿದ್ದಾರೆ.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾ ಯಾತ್ರೆಯಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೊ ಇಳಿಸಿ ಜನರನ್ನ ರಂಜಿಸಿತ್ತು. ಆ ದಿನ ಬಂದ ಹಣವನ್ನು ಸ್ವಂತಕ್ಕೆ ಬಳಸದೇ ಅಶಕ್ತರಿಗೆ ನೀಡಿದೆ.

ಹೆಬ್ರಿ: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವು – Vishwanews24

Leave a Reply