ಮಂಗಳೂರು: ತಾಯಿಯಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ಹೋಗಿದ್ದ ಯುವಕನೋರ್ವ ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದೇರಳಕಟ್ಟೆಯ ಎಸ್ ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮೊಹಮ್ಮದ್ ನಿಯಾಜ್ (33 ವರ್ಷ) ನಾಪತ್ತೆಯಾದ ಯುವಕ.
ನಿಯಾಜ್ ಆ.2ರಂದು ತನ್ನ ತಾಯಿ ಹಾಜಿರರವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು ಅದೇ ದಿನ ಮಧ್ಯಾಹ್ನ ಆತನ ಹೆಂಡತಿ ಶಹಳಳಿಗೆ ಕರೆ ಮಾಡಿ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ನನ್ನ ತಂಗಿ ಮಗುವನ್ನು ನೋಡಲು ಹೋಗೋಣ ನೀನು ರೆಡಿಯಾಗಿರು ಎಂದು ತಿಳಿಸಿದ್ದಾರೆ. ನಂತರ ಶಹಳ ಮತ್ತೆ ಮೊಹಮ್ಮದ್ ನಿಯಾಜ್ ನಿಗೆ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಮೊಹಮ್ಮದ್ ನಿಯಾಜ್ ತನ್ನ ಮನೆಗೂ ಬಾರದೆ, ಹೆಂಡತಿಯ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ.
ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದ ಇವರು ಬ್ಯಾರಿ, ಕನ್ನಡ, ತುಳು, ಹಿಂದಿ, ಮಲಯಾಳಂ ಭಾಷೆಯನ್ನು ತಿಳಿದಿದ್ದಾರೆ. ಇವರು ನಾಪತ್ತೆಯಾದ ದಿನ ಬಿಳಿ ಬಣ್ಣದ ಪ್ರಿಂಟೆಡ್ ಶರ್ಟ್ ಹಾಗೂ ಕಪ್ಪು ಬಣ್ಣದ ಫಾರ್ಮಲ್ಸ್ ಪ್ಯಾಂಟ್ ಧರಿಸಿದ್ದರು ಎಂದು ತಿಳಿದುಬಂದಿದೆ. ಇವರ ಮಾಹಿತಿ ಸಿಕ್ಕಲ್ಲಿ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…