Featured

ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ : ದಿನೇಶ್ ಗುಂಡೂರಾವ್ – Vishwanews24

ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ : ದಿನೇಶ್ ಗುಂಡೂರಾವ್

ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳಾದೇವಿ ದೇವಸ್ಥಾನದಲ್ಲಿ  ವ್ಯಾಪಾರ ಧರ್ಮದಂಗಲ್ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಸಂವಿಧಾನದ ಪ್ರಕಾರ ದೇಶ ನಡೆಯಬೇಕು, ಯಾವುದೋ ಧರ್ಮದ ಪ್ರಕಾರ ಅಲ್ಲ. ಎಲ್ಲರಿಗೂ ಸಮಾನ ಹಕ್ಕುಗಳು ಈ ದೇಶದಲ್ಲಿ ಇರಬೇಕು ಎಂದರು.

ಅವರು (ವಿಹೆಚ್‍ಪಿ, ಬಜರಂಗದಳ) ಕರೆ ಕೊಡಲಿ, ಅವರ ಕರೆಯನ್ನು ಯಾರೂ ಒಪ್ಪಿಕೊಳ್ಳಬೇಕಿಲ್ಲ. ಆ ಕರೆಗಳಿಗೆ ಯಾವುದೇ ಕಾನೂನಿನ ಹಿನ್ನೆಲೆ ಇಲ್ಲ. ಅವರಿಗೆ ಈ ಥರ ವಿಚಾರ ಇಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸಬೇಕು. ಅವರ ರಾಜಕಾರಣ ಇದರಲ್ಲೇ ಇರೋದು, ಧಾರ್ಮಿಕ ರಾಜಕಾರಣ ಬಿಜೆಪಿ ಮಾಡುತ್ತೆ. ನಾನು ಈ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

 

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

11 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

19 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

26 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

39 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

51 minutes ago