ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ಧರ್ಮದಂಗಲ್ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಸಂವಿಧಾನದ ಪ್ರಕಾರ ದೇಶ ನಡೆಯಬೇಕು, ಯಾವುದೋ ಧರ್ಮದ ಪ್ರಕಾರ ಅಲ್ಲ. ಎಲ್ಲರಿಗೂ ಸಮಾನ ಹಕ್ಕುಗಳು ಈ ದೇಶದಲ್ಲಿ ಇರಬೇಕು ಎಂದರು.
ಅವರು (ವಿಹೆಚ್ಪಿ, ಬಜರಂಗದಳ) ಕರೆ ಕೊಡಲಿ, ಅವರ ಕರೆಯನ್ನು ಯಾರೂ ಒಪ್ಪಿಕೊಳ್ಳಬೇಕಿಲ್ಲ. ಆ ಕರೆಗಳಿಗೆ ಯಾವುದೇ ಕಾನೂನಿನ ಹಿನ್ನೆಲೆ ಇಲ್ಲ. ಅವರಿಗೆ ಈ ಥರ ವಿಚಾರ ಇಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸಬೇಕು. ಅವರ ರಾಜಕಾರಣ ಇದರಲ್ಲೇ ಇರೋದು, ಧಾರ್ಮಿಕ ರಾಜಕಾರಣ ಬಿಜೆಪಿ ಮಾಡುತ್ತೆ. ನಾನು ಈ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…