Featured

ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ – vishwanews24

ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ

ಮಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆ ಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.

ಮಂಗಳೂರು ಜಂಕ್ಷನ್-ತಿರುವ ನಂತಪುರ ನಾರ್ತ್ ವೀಕ್ಲಿ ಎಕ್ಸ್ ಪ್ರಸ್ ಸ್ಪೆಷಲ್ (ನಂ. 06041) ರೈಲು ಡಿ.7ರಿಂದ ಜ.18ರ ವರಗೆ ಪ್ರತಿ ರವಿವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್ ತಲುಪಲಿದೆ. ಅದೇ ರೀತಿತಿರುವನಂತಪುರ ನಾರ್ತ್-ಮಂಗ ಳೂರು ಜಂಕ್ಷನ್ ವೀಕ್ಲಿ ಎಕ್ಸ್ಪ್ರೆಸ್ ಸ್ಪೆಷಲ್ (ನಂ.06042) ರೈಲು ಡಿ.8ರಿಂದ ಜ.19ರ ವರಗೆ ಪ್ರತಿ ಸೋಮ ವಾರ ಬೆಳಗ್ಗೆ 8.30ಕ್ಕೆ ತಿರುವನಂತಪುರ ನಾರ್ತ್ ನಿಂದ ಹೊರಟು ಅದೇ ದಿನ ರಾತ್ರಿ 8.30ಕ್ಕೆ ಸೆಂಟ್ರಲ್ ತಲುಪಲಿದೆ.

ಶಬರಿಮಲೆ: 15 ಲಕ್ಷ ದಾಟಿದ ಯಾತ್ರಾರ್ಥಿಗಳ ಸಂಖ್ಯೆ
ಮಂಡಲ- ಮಕರಮಾಸ ಋತುವಿನ 18 ದಿನಗಳು ಪೂರ್ಣಗೊಂಡಿದ್ದು, ಶಬರಿಮಲೆ ತಲುಪಿದ ಒಟ್ಟು ಯಾತ್ರಾರ್ಥಿಗಳ ಸಂಖ್ಯೆ 15 ಲಕ್ಷ ದಾಟಿದೆ.
ಅಧಿಕೃತ ಅಂಕಿಅಂಶಗಳ ಪ್ರಕಾರ, ಡಿ. 3ರಂದು ಸಂಜೆ 7 ಗಂಟೆಯವರೆಗೆ 14,95,774 ಜನರು ದೇವಾಲಯ ತಲುಪಿ ದ್ದಾರೆ. ಸಂಜೆ 7 ಗಂಟೆಯ ಅನಂತರದ ಸಂಖ್ಯೆಯನ್ನು ಸೇರಿಸಿದರೆ,ಅದು 15 ಲಕ್ಷ ಮೀರುತ್ತದೆ. ಬುಧವಾರ ಬೆಳಗ್ಗೆ 12 ರಿಂದ ಸಂಜೆ 7 ಗಂಟೆಯವರೆಗೆ 66,522 ಜನರು ದೇವಾಲಯ ತಲುಪಿದರು.

ಇಂದು ಸನ್ನಿಧಾನದಲ್ಲಿ ಬೆಳಗಲಿದೆ ಕಾರ್ತಿಕ ದೀಪ
ವೃಶ್ಚಿಕ ಮಾಸದ ಕಾರ್ತಿಕ ದಿನವಾದ ಡಿ. 4ರಂದು ಶಬರಿಮಲೆ ಸನ್ನಿಧಾನದಲ್ಲಿ ಕಾರ್ತಿಕ ದೀಪ ಬೆಳಗಲಿದೆ. ಸಂಜೆ ದೀಪಾರಾಧನೆಗೂ ಮುನ್ನ ತಂತ್ರಿ ಕಾಂತಾರ ಮಹೇಶ್ ಮೋಹನ ಕಾರ್ತಿಕ ದೀಪ ಬೆಳಗಿಸುವರು.

ಸನ್ನಿಧಾನದ ಎಲ್ಲ ವಿಗ್ರಹಗಳ ಮುಂದೆ ದೀಪಗಳನ್ನು ಬೆಳಗಿಸಲಾಗುತ್ತದೆ ಮತ್ತು ಮಾಲಿಕಪ್ಪುರಂನಲ್ಲಿ ವಿಶೇಷ ದೀಪಾರಾಧನೆ ಮಾಡಲಾಗುತ್ತದೆ. ವಲಿಯನಾಡಪಂತಲ್, ಪಂಡಿತಾವಲಂ, ದೇವಸ್ವಂ, ಸರಕಾರಿ ಕಟ್ಟಡಗಳು, ವ್ಯಾಪಾರ ಸ್ಥಳಗಳು, ಪಂಪಾ ಮತ್ತು ನಿಲಕ್ಕಲ್‌ನಲ್ಲಿಯೂ ಈ ಸಂದರ್ಭ ದೀಪಗಳನ್ನು ಬೆಳಗಿಸಲಾಗುತ್ತದೆ.
Pr

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago