Featured

ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ – vishwanews24

ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ

ಮಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆ ಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.

ಮಂಗಳೂರು ಜಂಕ್ಷನ್-ತಿರುವ ನಂತಪುರ ನಾರ್ತ್ ವೀಕ್ಲಿ ಎಕ್ಸ್ ಪ್ರಸ್ ಸ್ಪೆಷಲ್ (ನಂ. 06041) ರೈಲು ಡಿ.7ರಿಂದ ಜ.18ರ ವರಗೆ ಪ್ರತಿ ರವಿವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್ ತಲುಪಲಿದೆ. ಅದೇ ರೀತಿತಿರುವನಂತಪುರ ನಾರ್ತ್-ಮಂಗ ಳೂರು ಜಂಕ್ಷನ್ ವೀಕ್ಲಿ ಎಕ್ಸ್ಪ್ರೆಸ್ ಸ್ಪೆಷಲ್ (ನಂ.06042) ರೈಲು ಡಿ.8ರಿಂದ ಜ.19ರ ವರಗೆ ಪ್ರತಿ ಸೋಮ ವಾರ ಬೆಳಗ್ಗೆ 8.30ಕ್ಕೆ ತಿರುವನಂತಪುರ ನಾರ್ತ್ ನಿಂದ ಹೊರಟು ಅದೇ ದಿನ ರಾತ್ರಿ 8.30ಕ್ಕೆ ಸೆಂಟ್ರಲ್ ತಲುಪಲಿದೆ.

ಶಬರಿಮಲೆ: 15 ಲಕ್ಷ ದಾಟಿದ ಯಾತ್ರಾರ್ಥಿಗಳ ಸಂಖ್ಯೆ
ಮಂಡಲ- ಮಕರಮಾಸ ಋತುವಿನ 18 ದಿನಗಳು ಪೂರ್ಣಗೊಂಡಿದ್ದು, ಶಬರಿಮಲೆ ತಲುಪಿದ ಒಟ್ಟು ಯಾತ್ರಾರ್ಥಿಗಳ ಸಂಖ್ಯೆ 15 ಲಕ್ಷ ದಾಟಿದೆ.
ಅಧಿಕೃತ ಅಂಕಿಅಂಶಗಳ ಪ್ರಕಾರ, ಡಿ. 3ರಂದು ಸಂಜೆ 7 ಗಂಟೆಯವರೆಗೆ 14,95,774 ಜನರು ದೇವಾಲಯ ತಲುಪಿ ದ್ದಾರೆ. ಸಂಜೆ 7 ಗಂಟೆಯ ಅನಂತರದ ಸಂಖ್ಯೆಯನ್ನು ಸೇರಿಸಿದರೆ,ಅದು 15 ಲಕ್ಷ ಮೀರುತ್ತದೆ. ಬುಧವಾರ ಬೆಳಗ್ಗೆ 12 ರಿಂದ ಸಂಜೆ 7 ಗಂಟೆಯವರೆಗೆ 66,522 ಜನರು ದೇವಾಲಯ ತಲುಪಿದರು.

ಇಂದು ಸನ್ನಿಧಾನದಲ್ಲಿ ಬೆಳಗಲಿದೆ ಕಾರ್ತಿಕ ದೀಪ
ವೃಶ್ಚಿಕ ಮಾಸದ ಕಾರ್ತಿಕ ದಿನವಾದ ಡಿ. 4ರಂದು ಶಬರಿಮಲೆ ಸನ್ನಿಧಾನದಲ್ಲಿ ಕಾರ್ತಿಕ ದೀಪ ಬೆಳಗಲಿದೆ. ಸಂಜೆ ದೀಪಾರಾಧನೆಗೂ ಮುನ್ನ ತಂತ್ರಿ ಕಾಂತಾರ ಮಹೇಶ್ ಮೋಹನ ಕಾರ್ತಿಕ ದೀಪ ಬೆಳಗಿಸುವರು.

ಸನ್ನಿಧಾನದ ಎಲ್ಲ ವಿಗ್ರಹಗಳ ಮುಂದೆ ದೀಪಗಳನ್ನು ಬೆಳಗಿಸಲಾಗುತ್ತದೆ ಮತ್ತು ಮಾಲಿಕಪ್ಪುರಂನಲ್ಲಿ ವಿಶೇಷ ದೀಪಾರಾಧನೆ ಮಾಡಲಾಗುತ್ತದೆ. ವಲಿಯನಾಡಪಂತಲ್, ಪಂಡಿತಾವಲಂ, ದೇವಸ್ವಂ, ಸರಕಾರಿ ಕಟ್ಟಡಗಳು, ವ್ಯಾಪಾರ ಸ್ಥಳಗಳು, ಪಂಪಾ ಮತ್ತು ನಿಲಕ್ಕಲ್‌ನಲ್ಲಿಯೂ ಈ ಸಂದರ್ಭ ದೀಪಗಳನ್ನು ಬೆಳಗಿಸಲಾಗುತ್ತದೆ.
Pr

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

8 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

10 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

10 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

10 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

10 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago