ಮಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆ ಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.
ಮಂಗಳೂರು ಜಂಕ್ಷನ್-ತಿರುವ ನಂತಪುರ ನಾರ್ತ್ ವೀಕ್ಲಿ ಎಕ್ಸ್ ಪ್ರಸ್ ಸ್ಪೆಷಲ್ (ನಂ. 06041) ರೈಲು ಡಿ.7ರಿಂದ ಜ.18ರ ವರಗೆ ಪ್ರತಿ ರವಿವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್ ತಲುಪಲಿದೆ. ಅದೇ ರೀತಿತಿರುವನಂತಪುರ ನಾರ್ತ್-ಮಂಗ ಳೂರು ಜಂಕ್ಷನ್ ವೀಕ್ಲಿ ಎಕ್ಸ್ಪ್ರೆಸ್ ಸ್ಪೆಷಲ್ (ನಂ.06042) ರೈಲು ಡಿ.8ರಿಂದ ಜ.19ರ ವರಗೆ ಪ್ರತಿ ಸೋಮ ವಾರ ಬೆಳಗ್ಗೆ 8.30ಕ್ಕೆ ತಿರುವನಂತಪುರ ನಾರ್ತ್ ನಿಂದ ಹೊರಟು ಅದೇ ದಿನ ರಾತ್ರಿ 8.30ಕ್ಕೆ ಸೆಂಟ್ರಲ್ ತಲುಪಲಿದೆ.
ಶಬರಿಮಲೆ: 15 ಲಕ್ಷ ದಾಟಿದ ಯಾತ್ರಾರ್ಥಿಗಳ ಸಂಖ್ಯೆ
ಮಂಡಲ- ಮಕರಮಾಸ ಋತುವಿನ 18 ದಿನಗಳು ಪೂರ್ಣಗೊಂಡಿದ್ದು, ಶಬರಿಮಲೆ ತಲುಪಿದ ಒಟ್ಟು ಯಾತ್ರಾರ್ಥಿಗಳ ಸಂಖ್ಯೆ 15 ಲಕ್ಷ ದಾಟಿದೆ.
ಅಧಿಕೃತ ಅಂಕಿಅಂಶಗಳ ಪ್ರಕಾರ, ಡಿ. 3ರಂದು ಸಂಜೆ 7 ಗಂಟೆಯವರೆಗೆ 14,95,774 ಜನರು ದೇವಾಲಯ ತಲುಪಿ ದ್ದಾರೆ. ಸಂಜೆ 7 ಗಂಟೆಯ ಅನಂತರದ ಸಂಖ್ಯೆಯನ್ನು ಸೇರಿಸಿದರೆ,ಅದು 15 ಲಕ್ಷ ಮೀರುತ್ತದೆ. ಬುಧವಾರ ಬೆಳಗ್ಗೆ 12 ರಿಂದ ಸಂಜೆ 7 ಗಂಟೆಯವರೆಗೆ 66,522 ಜನರು ದೇವಾಲಯ ತಲುಪಿದರು.
ಇಂದು ಸನ್ನಿಧಾನದಲ್ಲಿ ಬೆಳಗಲಿದೆ ಕಾರ್ತಿಕ ದೀಪ
ವೃಶ್ಚಿಕ ಮಾಸದ ಕಾರ್ತಿಕ ದಿನವಾದ ಡಿ. 4ರಂದು ಶಬರಿಮಲೆ ಸನ್ನಿಧಾನದಲ್ಲಿ ಕಾರ್ತಿಕ ದೀಪ ಬೆಳಗಲಿದೆ. ಸಂಜೆ ದೀಪಾರಾಧನೆಗೂ ಮುನ್ನ ತಂತ್ರಿ ಕಾಂತಾರ ಮಹೇಶ್ ಮೋಹನ ಕಾರ್ತಿಕ ದೀಪ ಬೆಳಗಿಸುವರು.
ಸನ್ನಿಧಾನದ ಎಲ್ಲ ವಿಗ್ರಹಗಳ ಮುಂದೆ ದೀಪಗಳನ್ನು ಬೆಳಗಿಸಲಾಗುತ್ತದೆ ಮತ್ತು ಮಾಲಿಕಪ್ಪುರಂನಲ್ಲಿ ವಿಶೇಷ ದೀಪಾರಾಧನೆ ಮಾಡಲಾಗುತ್ತದೆ. ವಲಿಯನಾಡಪಂತಲ್, ಪಂಡಿತಾವಲಂ, ದೇವಸ್ವಂ, ಸರಕಾರಿ ಕಟ್ಟಡಗಳು, ವ್ಯಾಪಾರ ಸ್ಥಳಗಳು, ಪಂಪಾ ಮತ್ತು ನಿಲಕ್ಕಲ್ನಲ್ಲಿಯೂ ಈ ಸಂದರ್ಭ ದೀಪಗಳನ್ನು ಬೆಳಗಿಸಲಾಗುತ್ತದೆ.
Pr
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…