ಮಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆ ಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.
ಮಂಗಳೂರು ಜಂಕ್ಷನ್-ತಿರುವ ನಂತಪುರ ನಾರ್ತ್ ವೀಕ್ಲಿ ಎಕ್ಸ್ ಪ್ರಸ್ ಸ್ಪೆಷಲ್ (ನಂ. 06041) ರೈಲು ಡಿ.7ರಿಂದ ಜ.18ರ ವರಗೆ ಪ್ರತಿ ರವಿವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್ ತಲುಪಲಿದೆ. ಅದೇ ರೀತಿತಿರುವನಂತಪುರ ನಾರ್ತ್-ಮಂಗ ಳೂರು ಜಂಕ್ಷನ್ ವೀಕ್ಲಿ ಎಕ್ಸ್ಪ್ರೆಸ್ ಸ್ಪೆಷಲ್ (ನಂ.06042) ರೈಲು ಡಿ.8ರಿಂದ ಜ.19ರ ವರಗೆ ಪ್ರತಿ ಸೋಮ ವಾರ ಬೆಳಗ್ಗೆ 8.30ಕ್ಕೆ ತಿರುವನಂತಪುರ ನಾರ್ತ್ ನಿಂದ ಹೊರಟು ಅದೇ ದಿನ ರಾತ್ರಿ 8.30ಕ್ಕೆ ಸೆಂಟ್ರಲ್ ತಲುಪಲಿದೆ.
ಶಬರಿಮಲೆ: 15 ಲಕ್ಷ ದಾಟಿದ ಯಾತ್ರಾರ್ಥಿಗಳ ಸಂಖ್ಯೆ
ಮಂಡಲ- ಮಕರಮಾಸ ಋತುವಿನ 18 ದಿನಗಳು ಪೂರ್ಣಗೊಂಡಿದ್ದು, ಶಬರಿಮಲೆ ತಲುಪಿದ ಒಟ್ಟು ಯಾತ್ರಾರ್ಥಿಗಳ ಸಂಖ್ಯೆ 15 ಲಕ್ಷ ದಾಟಿದೆ.
ಅಧಿಕೃತ ಅಂಕಿಅಂಶಗಳ ಪ್ರಕಾರ, ಡಿ. 3ರಂದು ಸಂಜೆ 7 ಗಂಟೆಯವರೆಗೆ 14,95,774 ಜನರು ದೇವಾಲಯ ತಲುಪಿ ದ್ದಾರೆ. ಸಂಜೆ 7 ಗಂಟೆಯ ಅನಂತರದ ಸಂಖ್ಯೆಯನ್ನು ಸೇರಿಸಿದರೆ,ಅದು 15 ಲಕ್ಷ ಮೀರುತ್ತದೆ. ಬುಧವಾರ ಬೆಳಗ್ಗೆ 12 ರಿಂದ ಸಂಜೆ 7 ಗಂಟೆಯವರೆಗೆ 66,522 ಜನರು ದೇವಾಲಯ ತಲುಪಿದರು.
ಇಂದು ಸನ್ನಿಧಾನದಲ್ಲಿ ಬೆಳಗಲಿದೆ ಕಾರ್ತಿಕ ದೀಪ
ವೃಶ್ಚಿಕ ಮಾಸದ ಕಾರ್ತಿಕ ದಿನವಾದ ಡಿ. 4ರಂದು ಶಬರಿಮಲೆ ಸನ್ನಿಧಾನದಲ್ಲಿ ಕಾರ್ತಿಕ ದೀಪ ಬೆಳಗಲಿದೆ. ಸಂಜೆ ದೀಪಾರಾಧನೆಗೂ ಮುನ್ನ ತಂತ್ರಿ ಕಾಂತಾರ ಮಹೇಶ್ ಮೋಹನ ಕಾರ್ತಿಕ ದೀಪ ಬೆಳಗಿಸುವರು.
ಸನ್ನಿಧಾನದ ಎಲ್ಲ ವಿಗ್ರಹಗಳ ಮುಂದೆ ದೀಪಗಳನ್ನು ಬೆಳಗಿಸಲಾಗುತ್ತದೆ ಮತ್ತು ಮಾಲಿಕಪ್ಪುರಂನಲ್ಲಿ ವಿಶೇಷ ದೀಪಾರಾಧನೆ ಮಾಡಲಾಗುತ್ತದೆ. ವಲಿಯನಾಡಪಂತಲ್, ಪಂಡಿತಾವಲಂ, ದೇವಸ್ವಂ, ಸರಕಾರಿ ಕಟ್ಟಡಗಳು, ವ್ಯಾಪಾರ ಸ್ಥಳಗಳು, ಪಂಪಾ ಮತ್ತು ನಿಲಕ್ಕಲ್ನಲ್ಲಿಯೂ ಈ ಸಂದರ್ಭ ದೀಪಗಳನ್ನು ಬೆಳಗಿಸಲಾಗುತ್ತದೆ.
Pr
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…