Featured

ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ – vishwanews24

ಮಂಗಳೂರು – ಶಬರಿಮಲೆ ನಡುವೆ ವಿಶೇಷ ರೈಲುಗಳ ಸಂಚಾರ

ಮಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ದಟ್ಟಣೆಯ ಹಿನ್ನೆಲೆ ಯಲ್ಲಿ ಮಂಗಳೂರು ಜಂಕ್ಷನ್ ಮತ್ತು ತಿರುವನಂತಪುರ ನಾರ್ತ್ ನಿಲ್ದಾಣ ಗಳ ನಡುವೆ ವಿಶೇಷ ರೈಲುಗಳು ಸಂಚರಿಸಲಿವೆ.

ಮಂಗಳೂರು ಜಂಕ್ಷನ್-ತಿರುವ ನಂತಪುರ ನಾರ್ತ್ ವೀಕ್ಲಿ ಎಕ್ಸ್ ಪ್ರಸ್ ಸ್ಪೆಷಲ್ (ನಂ. 06041) ರೈಲು ಡಿ.7ರಿಂದ ಜ.18ರ ವರಗೆ ಪ್ರತಿ ರವಿವಾರ ಸಂಜೆ 6ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ತಿರುವನಂತಪುರ ನಾರ್ತ್ ತಲುಪಲಿದೆ. ಅದೇ ರೀತಿತಿರುವನಂತಪುರ ನಾರ್ತ್-ಮಂಗ ಳೂರು ಜಂಕ್ಷನ್ ವೀಕ್ಲಿ ಎಕ್ಸ್ಪ್ರೆಸ್ ಸ್ಪೆಷಲ್ (ನಂ.06042) ರೈಲು ಡಿ.8ರಿಂದ ಜ.19ರ ವರಗೆ ಪ್ರತಿ ಸೋಮ ವಾರ ಬೆಳಗ್ಗೆ 8.30ಕ್ಕೆ ತಿರುವನಂತಪುರ ನಾರ್ತ್ ನಿಂದ ಹೊರಟು ಅದೇ ದಿನ ರಾತ್ರಿ 8.30ಕ್ಕೆ ಸೆಂಟ್ರಲ್ ತಲುಪಲಿದೆ.

ಶಬರಿಮಲೆ: 15 ಲಕ್ಷ ದಾಟಿದ ಯಾತ್ರಾರ್ಥಿಗಳ ಸಂಖ್ಯೆ
ಮಂಡಲ- ಮಕರಮಾಸ ಋತುವಿನ 18 ದಿನಗಳು ಪೂರ್ಣಗೊಂಡಿದ್ದು, ಶಬರಿಮಲೆ ತಲುಪಿದ ಒಟ್ಟು ಯಾತ್ರಾರ್ಥಿಗಳ ಸಂಖ್ಯೆ 15 ಲಕ್ಷ ದಾಟಿದೆ.
ಅಧಿಕೃತ ಅಂಕಿಅಂಶಗಳ ಪ್ರಕಾರ, ಡಿ. 3ರಂದು ಸಂಜೆ 7 ಗಂಟೆಯವರೆಗೆ 14,95,774 ಜನರು ದೇವಾಲಯ ತಲುಪಿ ದ್ದಾರೆ. ಸಂಜೆ 7 ಗಂಟೆಯ ಅನಂತರದ ಸಂಖ್ಯೆಯನ್ನು ಸೇರಿಸಿದರೆ,ಅದು 15 ಲಕ್ಷ ಮೀರುತ್ತದೆ. ಬುಧವಾರ ಬೆಳಗ್ಗೆ 12 ರಿಂದ ಸಂಜೆ 7 ಗಂಟೆಯವರೆಗೆ 66,522 ಜನರು ದೇವಾಲಯ ತಲುಪಿದರು.

ಇಂದು ಸನ್ನಿಧಾನದಲ್ಲಿ ಬೆಳಗಲಿದೆ ಕಾರ್ತಿಕ ದೀಪ
ವೃಶ್ಚಿಕ ಮಾಸದ ಕಾರ್ತಿಕ ದಿನವಾದ ಡಿ. 4ರಂದು ಶಬರಿಮಲೆ ಸನ್ನಿಧಾನದಲ್ಲಿ ಕಾರ್ತಿಕ ದೀಪ ಬೆಳಗಲಿದೆ. ಸಂಜೆ ದೀಪಾರಾಧನೆಗೂ ಮುನ್ನ ತಂತ್ರಿ ಕಾಂತಾರ ಮಹೇಶ್ ಮೋಹನ ಕಾರ್ತಿಕ ದೀಪ ಬೆಳಗಿಸುವರು.

ಸನ್ನಿಧಾನದ ಎಲ್ಲ ವಿಗ್ರಹಗಳ ಮುಂದೆ ದೀಪಗಳನ್ನು ಬೆಳಗಿಸಲಾಗುತ್ತದೆ ಮತ್ತು ಮಾಲಿಕಪ್ಪುರಂನಲ್ಲಿ ವಿಶೇಷ ದೀಪಾರಾಧನೆ ಮಾಡಲಾಗುತ್ತದೆ. ವಲಿಯನಾಡಪಂತಲ್, ಪಂಡಿತಾವಲಂ, ದೇವಸ್ವಂ, ಸರಕಾರಿ ಕಟ್ಟಡಗಳು, ವ್ಯಾಪಾರ ಸ್ಥಳಗಳು, ಪಂಪಾ ಮತ್ತು ನಿಲಕ್ಕಲ್‌ನಲ್ಲಿಯೂ ಈ ಸಂದರ್ಭ ದೀಪಗಳನ್ನು ಬೆಳಗಿಸಲಾಗುತ್ತದೆ.
Pr

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago