Featured

ಮಂಗಳೂರು: ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ:  ಪ್ರಕರಣ ದಾಖಲು – vishwanews24

ಮಂಗಳೂರು: ಶರಣ್​ ಪಂಪ್ವೆಲ್​, ಭರತ್ ಕುಮ್ಡೇಲ್​​ಗೆ ಜೀವ ಬೆದರಿಕೆ:  ಪ್ರಕರಣ ದಾಖಲು

ಮಂಗಳೂರು : ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು.

ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್. ಶರಣ್ ಹತ್ಯೆಯಾಗಲು ತಯಾರಾಗು’’ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ಬೆದರಿಕೆ ಹಾಕಲಾಗಿತ್ತು. ಶರಣ್ ಪಂಪ್ವೆಲ್ ಮಾತ್ರವಲ್ಲದೆ ಇನ್ನೂ ಕೆಲವು ಮಂದಿ ಮುಖಂಡರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಬೆದರಿಕೆ ಹಾಕಲಾಗಿದೆ.

ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್​ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ. ‘‘ಅಶ್ರಫ್ ಕೊಂದ ಭರತ್​ನನ್ನು ಮರೆತಿಲ್ಲ ಎಂದು ಕಿಡಿಗೇಡಿಗಳು ಪೋಸ್ಟ್ ಹಾಕಿದ್ದರು. ‘‘Wait and watch’’ ಎಂದು ತಲ್ವಾರ್ ಫೋಟೋ ಪೋಸ್ಟ್ ಮಾಡಿದ್ದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿರುವ ಸಂದರ್ಭದಲ್ಲೇ ಇಂತಹ ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭಾರತ್ ಕುಮ್ಡೇಲ್ ಎಂಬ ಬರಹವುಳ್ಳ ಸಂದೇಶಗಳು ಸಾಮಾಜಿಕ ಮಾಧ್ಯಮಗಳಾಗಿ ಹರಿದಾಡಿದ್ದವು.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

4 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

7 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

7 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

8 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

8 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

8 hours ago