Featured

ಮಂಗಳೂರು : ಶರಣ್​ ಪಂಪ್​ವೆಲ್ ವಿರುದ್ಧದ ಪೊಲೀಸ್ FIR ​​ಗೆ ಹೈಕೋರ್ಟ್ ತಾತ್ಕಾಲಿಕ ತಡೆ.. Vishwanews24

ಮಂಗಳೂರು : ಶರಣ್​ ಪಂಪ್​ವೆಲ್ ವಿರುದ್ಧದ ಪೊಲೀಸ್ FIR ​​ಗೆ ಹೈಕೋರ್ಟ್ ತಾತ್ಕಾಲಿಕ ತಡೆ..

ಮಂಗಳೂರು: ಮಂಗಳಾದೇವಿ ದೇವಸ್ಥಾನದಲ್ಲಿನ ವ್ಯಾಪಾರ ಕುರಿತ ಧರ್ಮ ದಂಗಲ್ ವಿಚಾರವಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್  ವಿರುದ್ಧದ ಪೊಲೀಸ್ ಎಫ್ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಮಂಗಳೂರಿನ ಪಾಂಡೇಶ್ವರ ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಶರಣ್ ಪಂಪ್ ವೆಲ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆವರೆಗೆ ತಡೆಯಾಜ್ಞೆ ನೀಡಿದೆ. ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ಕೊಟ್ಟಿದ್ದ ಹಿನ್ನೆಲೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಮಂಗಳಾದೇವಿ ಆವರಣದಲ್ಲಿರೋ ಹಿಂದೂಗಳ ಅಂಗಡಿಗಳ  ಮುಂದೆ ಭಗವಾಧ್ವಜ ಅಳವಡಿಸಲಾಗಿತ್ತು. ಭಕ್ತರು ಹಿಂದೂಗಳ ಮಳಿಗೆಯಲ್ಲಿಯೇ ವ್ಯಾಪಾರ ಮಾಡಬೇಕೆಂಬ ಬ್ಯಾನರ್ ಹಾಕಲಾಗಿತ್ತು. ಈ ಹಿನ್ನೆಲೆ ಪಾಂಡವೇಶ್ವರ ಠಾಣೆಯ ಪೊಲೀಸರು ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.

ಧರ್ಮ ದಂಗಲ್​ ಹಿನ್ನೆಲೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಮಾನ ಮನಸ್ಕ ಸಂಘಟನೆಗಳಾದ ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ, ಎಡಪಂಥೀಯ ನಿಯೋಗ ಭೇಟಿಯಾಗಿತ್ತು. ಸಚಿವ ದಿನೇಶ್ ಗುಂಡೂರಾವ್ ಎದುರು ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅಸಮಾಧಾನ ವ್ಯಕ್ತಪಡಿಸಿದ್ದರು.

ಶರಣ್ ಪಂಪ್​ವೆಲ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು ಸಂಘಟನೆಗಳ ಸದಸ್ಯರು ಆಗ್ರಹಿಸಿದ್ದರು. ಆ ಬಳಿಕ‌ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಕರೆದು ಕಾನೂನು ಕ್ರಮಕ್ಕೆ ದಿನೇಶ್ ಗುಂಡೂರಾವ್ ಸೂಚಿಸಿದ್ದರು. ಗುಂಡೂರಾವ್ ಸೂಚನೆ ಬೆನ್ನಲ್ಲೇ ಎಫ್ಐಆರ್ ದಾಖಲಾಗಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago