Featured

ಮಂಗಳೂರು :ಶಾಲಾ ಮುಂಭಾಗ ಘೋಷಣೆ ಕೂಗಿ ಗೂಂಡಾಗಿರಿ :  ಶಾಸಕ ವೇದವ್ಯಾಸ ಕಾಮತ್ ವಿರುದ್ದ ಕ್ರಮಕ್ಕೆ ಸೂಕ್ತ  ಸಿಪಿಐಎಂ ಆಗ್ರಹ – Vishwanews24

ಮಂಗಳೂರು :ಶಾಲಾ ಮುಂಭಾಗ ಘೋಷಣೆ ಕೂಗಿ ಗೂಂಡಾಗಿರಿ :  ಶಾಸಕ ವೇದವ್ಯಾಸ ಕಾಮತ್ ವಿರುದ್ದ ಕ್ರಮಕ್ಕೆ ಸೂಕ್ತ  ಸಿಪಿಐಎಂ ಆಗ್ರಹ

ಮಂಗಳೂರು : ಮಂಗಳೂರು ನಗರ ಜೆರೋಸಾ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಮತ್ತು ದೇವರನ್ನು ಅವಹೇಳನಕರವಾಗಿ ಬೋಧಿಸಿದ್ದಾರೆಂದು ಆರೋಪಿಸಿ ಪೋಷಕರು ನೀಡಿದ ದೂರುಗಳನ್ನಾದರಿಸಿ ಸಮಗ್ರವಾದ ತನಿಖೆ ನಡೆಸುವ ಮತ್ತು ಕಾನೂನಿನಡಿಯಲ್ಲಿ ನ್ಯಾಯ ತೆಗೆಸಿಕೊಡಬೇಕಾಗಿದ್ದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತರು ಸರಕಾರಿ ನಿಯಮಗಳನ್ನೆಲ್ಲಾ ಗಾಳಿಗೆ ತೂರಿ ಅದೇ ಶಾಲಾ ಮಕ್ಕಳನ್ನು ಮತ್ತು ಪೋಷಕರನ್ನು ಸೇರಿಸಿ ಶಾಲಾ ಮುಂಭಾಗ ಘೋಷಣೆಯನ್ನು ಕೂಗಿದ್ದಲ್ಲದೆ ಗುಂಡಾಗಿರಿ ನಡೆಸಿದ ಕ್ರಮವನ್ನು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ಖಂಡಿಸುತ್ತದೆ ಮತ್ತು ಶಾಸಕರ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸುತ್ತದೆ.

ಶಾಸಕ ವೇದವ್ಯಾಸ‌ ಕಾಮತ್ ಮತ್ತು ಸಂಘಪರಿವಾರ ಕ್ರೈಸ್ತ ಮಿಷನರಿ ಶಾಲಾ ಶಿಕ್ಷಕಿ ಆ ರೀತಿ ಬೋಧನೆ ಮಾಡಿದ‌ ನೆಪವನ್ನು ಮುಂದಿಟ್ಟುಕೊಂಡು ಚುನಾವಣಾ ರಾಜಕೀಯ ನಡೆಸುತ್ತಿರುವುದು ಮೇಲ್ನೋಟಕ್ಕೆ ಬಲವಾಗಿ ಎದ್ದು ಕಾಣುತ್ತಿದೆ. ಇಲ್ಲಿ ಶಾಸಕರಿಗೆ ಶಾಲಾ ಮಕ್ಕಳ ಮೇಲಾಗಲಿ ಪೋಷಕರ ಮೇಲಾಗಲಿ ಯಾವುದೇ ಕಾಳಜಿಗಳು ಕಾಣುತ್ತಿಲ್ಲ. ಒಂದು ವೇಳೆ ಕಾಳಜಿ ಇರುತ್ತಿದ್ದರೆ ತಾನೊಬ್ಬ ಶಾಸಕನೆಂದು ಮರೆತು ಮಕ್ಕಳನ್ನು ಮತ್ತು ಪೋಷಕರನ್ನು ಒಟ್ಟು ಸೇರಿಸಿ ಶಾಲಾ ಆವರಣ ಮುಂಭಾಗ ಗೂಂಡಾಗಿರಿ ಮೆರೆಯುವ ಅಗತ್ಯತೆ ಇರಲಿಲ್ಲ. ಶಾಲಾ ಮಂಡಳಿ ಮತ್ತು ಪೋಷಕರ ನಡುವೆ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ನೆಲದ ಕಾನೂನಿನಡಿಯಲ್ಲಿ ಕನಿಷ್ಠ ನ್ಯಾಯ ತೆಗೆಸಿಕೊಡುವ ಜವಾಬ್ದಾರಿ ವಹಿಸಿಕೊಳ್ಳಬೇಕಿತ್ತು. ಇವರಿಗೆ ನಿಜವಾಗಿ ಹಿಂದೂ ಧರ್ಮದ ಮಕ್ಕಳ ಮೇಲೆ ಕಾಳಜಿ ಇರುತ್ತಿದ್ದರೆ ಶಾಸಕರಾಗಿದ್ದುಕೊಂಡು ತಮ್ಮ ಸರಕಾದ ಅವಧಿಯಲ್ಲಾಗಲಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸ ಮಾಡಲು ಸಾಧ್ಯವಾಗಲೇ ಇಲ್ಲ. ಇನ್ನು ಸರಕಾರಿ ಶಾಲೆಯಲ್ಲಿ ಕಲಿಸುತ್ತಿರುವಂತಹ ಅಥಿತಿ ಶಿಕ್ಷಕರು ಕಳೆದ ಮೂರು ತಿಂಗಳುಗಳಿಂದ ವೇತನ ಪಡೆಯದೆ ಸಂಕಷ್ಟ ಎದುರಿಸುತ್ತಿದ್ದಾರೆ ಮಾತ್ರವಲ್ಲ ಸೇವಾ ಭದ್ರತೆ ಇಲ್ಲದೆ ಉದ್ಯೋಗ ಕಳೆದುಕೊಳ್ಳುವ ಆತಂಕದಿಂದ ದಿನದೂಡುತ್ತಿದ್ದಾರೆ.

ಈ ಬಗ್ಗೆ ಒಂದು ದಿನವೂ ಶಾಸಕ ವೇದವ್ಯಾಸ ಕಾಮತರು ವಿಧಾನಸಭೆಯಲ್ಲಿ ಮಾತಾಡಲೇ ಇಲ್ಲ, ಕನಿಷ್ಟ ಯಾವುದೇ ಸರಕಾರಿ ಶಾಲೆಗಳ ಎದುರು ವೀರಾವೇಷದ ಘೋಷಣೆ ಕೂಗಿ ಹೋರಾಟನೂ ಮಾಡಲಿಲ್ಲ. ಇಂತಹ ಪ್ರಶ್ನೆಗಳ ಬಗ್ಗೆ ಮಾತನಾಡದ ಶಾಸಕರು ಹಿಂದು ಧರ್ಮ ಬಗ್ಗೆ ಅವಹೇಳನಕರ ಭೋದಿಸಿದ್ದಾರೆಂಬ ಆರೋಪದ ಕುರಿತು ಸತ್ಯಾಸತ್ಯತೆಯನ್ನು ತಿಳಿಯದೆ , ಸಮಗ್ರ ತನಿಖೆಗೂ ಆಗ್ರಹಿಸದೆ ಈ ರೀತಿ ಶಾಲಾ ಕಚೇರಿ ಎದುರು ಗೂಂಡಾಗಿರಿ ಪ್ರದರ್ಶಿಸುವ ನೈತಿಕತೆ ಇದೆಯೇ ?. ಇಷ್ಟೆಲ್ಲಾ ಘಟನೆಗಳು ನಡೆಯುತ್ತಿರುವಾಗಲೂ ಕಾಂಗ್ರೆಸ್ ಸರಕಾರ ಕನಿಷ್ಟ ಕೂಡಲೇ ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗದೇ, ಈ ರೀತಿ ಶಾಲಾ ಆವರಣ ಮುಂಭಾಗ ಅಕ್ರಮಕೂಟ ಸೇರಿಸಿ ಗೂಂಡಾಗಿರಿ ಮೆರೆದ ಶಾಸಕ ವೇದವ್ಯಾಸನ ಮೇಲೂ ಕ್ರಮಕೈಗೊಳ್ಳದೆ ಇರೋದು ನಾಚಿಕೆಗೇಡಿನ ಸಂಗತಿ ಎಂದು ಸಿಪಿಐಎಂ ನ ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

15 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

15 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

15 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

16 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

16 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

17 hours ago