Featured

ಮಂಗಳೂರು : ಶಾಲಾ ಮೈದಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ; ಭಜನೆ ಮಾಡುವ ಮೂಲಕ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ – vishwanews24

ಮಂಗಳೂರು : ಶಾಲೆಗಳ ಮೈದಾನದಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ ; ಭಜನೆ ಮಾಡುವ ಮೂಲಕ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಮಂಗಳೂರು : ಶಾಲೆಗಳ ಮೈದಾನದಲ್ಲಿ ಯಾವುದೇ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣ ಘಟಕದ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಗಡಿಯಾರ ಗೋಪುರದ ಬಳಿ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಯಿತು.

ಬಿಜೆಪಿ ದಕ್ಣಿಣ ಕನ್ನಡ‌ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಧಾರ್ಮಿಕ ಸ್ವಾತಂತ್ರ್ಯ ಹತ್ತಿಕ್ಕುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭ ಮಾಡಿದ್ದು, ಇದನ್ನು ಹಳ್ಳಿ ಹಳ್ಳಿಗಳಲ್ಲೂ ಮಾಡುತ್ತೇವೆ ಎಂದರು. ಸರ್ಕಾರಿ ಶಾಲೆಗಳು ಕಾಂಗ್ರೆಸ್‌ನವರ ಅಪ್ಪನ ಆಸ್ತಿ ಅಲ್ಲ.‌ ಶಾಲೆಗಳಲ್ಲಿ, ಹಾಗೂ ಅವುಗಳ ಮೈದಾನಗಳಲ್ಲಿ ನೂರಾರು ವರ್ಷಗಳಿಂದ ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳು ನಡೆದುಕೊಂಡು ಬಂದಿವೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಾಲಗಂಗಾಧರ ತಿಲಕ್‌ ಅವರ ನೇತೃತ್ವದಲ್ಲೇ ಸಾರ್ವಜನಿಕ ಗಣೇಶೋತ್ಸವ ಆಚರಣೆ ಶುರುವಾಗಿತ್ತು.

ಕೆಲವು ಶಾಲಾ ಮೈದಾನದಲ್ಲಿ ಹಿಂದಿನಿಂದಲೂ ಇಂತಹ ಆಚರಣೆಗಳು ನಡೆದುಕೊಂಡು ಬಂದಿವೆ. ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿಯೂ ಶಾಲಾ ಮೈದಾನದಲ್ಲಿ ಇವುಗಳನ್ನು ನಡೆಸಲಾಗುತ್ತದೆ’ ಎಂದರು.

Vishwa News 24

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

10 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

15 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

22 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

50 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

1 hour ago