ಮಂಗಳೂರು : ಶಾಲೆಗಳ ಮೈದಾನದಲ್ಲಿ ಯಾವುದೇ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣ ಘಟಕದ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಗಡಿಯಾರ ಗೋಪುರದ ಬಳಿ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಯಿತು.
ಬಿಜೆಪಿ ದಕ್ಣಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಧಾರ್ಮಿಕ ಸ್ವಾತಂತ್ರ್ಯ ಹತ್ತಿಕ್ಕುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಹೋರಾಟ ಪ್ರಾರಂಭ ಮಾಡಿದ್ದು, ಇದನ್ನು ಹಳ್ಳಿ ಹಳ್ಳಿಗಳಲ್ಲೂ ಮಾಡುತ್ತೇವೆ ಎಂದರು. ಸರ್ಕಾರಿ ಶಾಲೆಗಳು ಕಾಂಗ್ರೆಸ್ನವರ ಅಪ್ಪನ ಆಸ್ತಿ ಅಲ್ಲ. ಶಾಲೆಗಳಲ್ಲಿ, ಹಾಗೂ ಅವುಗಳ ಮೈದಾನಗಳಲ್ಲಿ ನೂರಾರು ವರ್ಷಗಳಿಂದ ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಗಳು ನಡೆದುಕೊಂಡು ಬಂದಿವೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಾಲಗಂಗಾಧರ ತಿಲಕ್ ಅವರ ನೇತೃತ್ವದಲ್ಲೇ ಸಾರ್ವಜನಿಕ ಗಣೇಶೋತ್ಸವ ಆಚರಣೆ ಶುರುವಾಗಿತ್ತು.
ಕೆಲವು ಶಾಲಾ ಮೈದಾನದಲ್ಲಿ ಹಿಂದಿನಿಂದಲೂ ಇಂತಹ ಆಚರಣೆಗಳು ನಡೆದುಕೊಂಡು ಬಂದಿವೆ. ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿಯೂ ಶಾಲಾ ಮೈದಾನದಲ್ಲಿ ಇವುಗಳನ್ನು ನಡೆಸಲಾಗುತ್ತದೆ’ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…