Featured

ಮಂಗಳೂರು: ಶಾಸಕರ ಅವೈಜ್ಞಾನಿಕ ಕಾಮಗಾರಿಗಳ ಅನುಷ್ಠಾನವೇ ಇಂದಿನ ಕೃತಕ ನೆರೆ ಮತ್ತು ಭೂ ಕುಸಿತಕ್ಕೆ ಮುಖ್ಯ ಕಾರಣ  ಐವನ್‌ ಡಿʼಸೋಜಾ ಆರೋಪ – vishwanews24

ಮಂಗಳೂರು: ಶಾಸಕರ ಅವೈಜ್ಞಾನಿಕ ಕಾಮಗಾರಿಗಳ ಅನುಷ್ಠಾನವೇ ಇಂದಿನ ಕೃತಕ ನೆರೆ ಮತ್ತು ಭೂ ಕುಸಿತಕ್ಕೆ ಮುಖ್ಯ ಕಾರಣ  ಐವನ್‌ ಡಿʼಸೋಜಾ ಆರೋಪ

ಮಂಗಳೂರು: 2019 ರಿಂದ 2023ರವರೆಗೆ ರಾಜ್ಯದ ಬಿಜೆಪಿ ಆಡಳಿತ ಸರಕಾರ ಮತ್ತು ಕಳೆದ 10 ವರ್ಷಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಬಿ.ಜೆಪಿ ಆಡಳಿತದಿಂದ ನಗರದ ಏಲ್ಲಾ ರಾಜಕಾಲುವೆಗಳು ಮತ್ತು ನೀರು ಹರಿಯುವ ತೋಡುಗಳ ಅಗಲತೆಯು ಕಡಿಮೆಯಾಗಿ, ಕಳಪೆ ಕಾಮಗಾರಿಗಳನ್ನು ನಡೆಸಿ ಸರಕಾರಿ ಹಣವನ್ನು ಪೋಲು ಮಾಡುವುದರ ಮೂಲಕ ಮತ್ತು ಅವೈಜ್ಞಾನಿಕವಾಗಿ, ಮಂಗಳೂರು ಮಹಾನಗರ ಪಾಲಿಕೆಯ ಕಾಮಗಾರಿಗಳ ಅನುಷ್ಠಾನವೇ ಇಂದಿನ ಕೃತಕ ನೆರೆ ಮತ್ತು ಭೂ ಕುಸಿತಕ್ಕೆ ಮುಖ್ಯ ಕಾರಣವಾಗಿರುತ್ತದೆ ಎಂದು ವಿಧಾನ ಪರಿಷತ್‌ ಶಾಸಕ ಐವನ್‌ ಡಿʼಸೋಜಾ ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ ಅವರು, ಬಿಜೆಪಿಯ 9 ವರ್ಷಗಳ ಆಡಳಿತದಲ್ಲಿ ಮತ್ತು ಹತ್ತು ವರ್ಷ ಮಹಾನಗರ ಪಾಲಿಕೆ ಆಡಳಿತದಲ್ಲಿ ಯಾವುದೆಲ್ಲ ಕಾಮಗಾರಿಗಳು ನಡೆಯಲ್ಪಟ್ಟಿದೆ ಮತ್ತು ಅದರಿಂದ ನೆರ ಹಾವಳಿ ಬಾರದಂತೆ ಯಾವ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದೀರಿ ? ಎಂದು ದಕ್ಷಿಣ ವಿದಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್‌ ರವರು ಸಾರ್ವಜನಿಕರಿಗೆ ಮುಖ್ಯವಾಗಿ ತಿಳಿಸಲೇಬೇಕಾಗಿದೆ ಎಂದರು.

ಮಂಗಳೂರು ಮಹಾನಗರ ಪಾಲಿಕೆ ಮೂಲಕ ಎಲ್ಲಾ ಅನುದಾನವನ್ನು ಶಾಸಕರು ಯಾವ ಯಾವ ಕಾಮಗಾರಿಗಳಿಗೆ ವಿತರಿಸಿದ್ದಾರೆ ಎಂಬುದರ ಬಗ್ಗೆ ದಾಖಲೆಗಳನ್ನು ತಿಳಿಸಲಿ ? ರಾಜ್ಯ ಬಿಜೆಪಿ ಸರಕಾರದ ಅವಧಿಯಲ್ಲಿ 75 ಕೋಟಿ ವಿಶೇಷ ಅನುದಾನವನ್ನು ಅನುಷ್ಠಾನಗೊಳಿಸಿದ ಬಗ್ಗೆ ಮಂಗಳೂರಿನ ರಾಜಕಾಲುವೆಯಗಳು ಹಾಗೂ ಮಳೆಗಾಲದ ಕೃತಕ ನೀರು ಸರಿಯಾಗಿ ಹರಿದು ಹೋಗುವುದಕ್ಕೆ ಯಾವ ಕ್ರಮವನ್ನು ಕೈಗೊಂಡಿದ್ದೀರಿ? ಈ ಬಗ್ಗೆ ಸಂಪೂರ್ಣ ವಿವರವಾದ ಚರ್ಚೆ ನಡೆಯಲಿ ಎಂದು ಸವಾಲು ಹಾಕಿದರು.

ಮಂಗಳೂರು ನಗರದ ವಾರ್ಡ್‌ ನಂ. 25 ದೇರೆಬೈಲ್‌ ಪಶ್ಚಿಮ ಶೇಡಿಗುರಿ ಈರಿ ಪ್ರದೇಶದಲ್ಲಿ ನಿರ್ಮಿಸಿದ ರಾಜ ಕಾಲುವೆಯ ಸಣ್ಣ ಸೇತುವೆಯ ಕಾಮಗಾರಿಯೂ ಇಂದು ಏನಾಗಿದೆ ? ಇದಕ್ಕೆ ಶಾಸಕರಾದ ವೇದವ್ಯಾಸ್‌ ಕಾಮತ್‌ ರವರು ಈ ಬಗ್ಗೆ ಕೂಡಲೇ ಸ್ಥಳ ಪರಿಶೀಲನೆ ಮಾಡಿ. ಕಾಮಗಾರಿಗಳ ಬಗ್ಗೆ ವಿಶ್ಲೇಷಣೆ ಮಾಡಲಿ. ರಾಜ್ಯ ಸರಕಾರದಿಂದ ನಡೆಯುವ ಕಾಮಗಾರಿಗಳು ಶಾಸಕರಾಗಿ ನೀವು ಸೂಚಿಸಿದ ಕಾಮಗಾರಿಗಳು ನೆರೆಹಾವಳಿಯನ್ನು ತಡೆಯುವ ಕಾಮಗಾರಿಗಳ ಪಟ್ಟಿಯಲ್ಲಿ ಇದೆಯೇ? ಇದನ್ನು ಸಾರ್ವಜನಿಕರ ಗಮನಕ್ಕೆ ತನ್ನಿರಿ ಎಂದರು.

ರಾಜ್ಯ ಸರಕಾರ ಬಿಡುಕಾಸು ಬಿಡುಗಡೆ ಮಾಡಿಲ್ಲ ಎಂದು ತಾವುಗಳು ತಮ್ಮ ಪತ್ರಿಕಾ ಹೇಳಿಕೆಯ ಮುಖಾಂತರ ಸುಳ್ಳು ಆರೋಪ ಮಾಡಿದ್ದೀರಿ ತಾವುಗಳು ಶಾಸಕರಾಗಿ ಕಾರ್ಯನಿರ್ವಹಿಸಲು ಅಸಮರ್ಥರು ಎಂಬುದು ತಮ್ಮ ಹೇಳಿಕೆಯ ಮುಖಾಂತರ ಎತ್ತಿ ತೋರಿಸುತ್ತದೆ. ಕ್ಷೇತ್ರದ ಅಭಿವೃದ್ದಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆಗೆ ನಿಮ್ಮ ಪ್ರಯತ್ನವಾದರೂ ಏನು? ತಮ್ಮ ಮಹಾನಗರ ಪಾಲಿಕೆ ಅಡಳಿತದಲ್ಲಿ ಮಳೆಗಾಲದ ಮುಂಜಾಗೃತಾ ಕ್ರಮವಾಗಿ ನೀವು ಈ ಕಾಮಗಾರಿಗಳನ್ನು ನಡೆಸಬಹುದಿತ್ತಲ್ಲವೇ? ಇದೀಗ ತಮ್ಮ ಉತ್ತರವನ್ನು ಬಯಸುತ್ತೇವೆ. ಮಳೆಹಾನಿ ಕಾಮಗಾರಿಗೆ ದ.ಕ. ಜಿಲ್ಲೆಗೆ ಈಗಾಗಲೇ ರೂ.21ಕೋಟಿ ಹಣವು ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿಯಮದಂತೆ ನರೆಹಾವಳಿಯಿಂದ ಉಂಟಾದ ಎಲ್ಲಾ ನಷ್ಟಗಳಿಗೆ ಪರಿಹಾರವನ್ನು ವಿತರಿಸುವರೇ ಸಾಕಷ್ಟು ಹಣವು ಸರಕಾರದ ಖಾತೆಯಲ್ಲಿ ಇದೆ ಇನ್ನು ಮುಂದಕ್ಕೆ ಹಣದ ಅಗತ್ಯವಿದ್ದರೆ ಅದರ ಸಂಪೂರ್ಣ ಜವಬ್ದಾರಿಯನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತದೆ ಎಂದು ತಮಗೆ ತಿಳಿದಿರಲಿ.

ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ.ನಮ್ಮ ಸರಕಾರವು ಮಳೆಗಾಲದಲ್ಲಿ ಸಾರ್ವಜನಿಕರ ಜೀವಹಾನಿಯಾಗದಂತೆ ತಡೆಯಲು ಪ್ರಯತ್ನಿಸುತ್ತದೆ ಎಂದು ಐವನ್‌ ಡಿʼಸೋಜಾ ತಿಳಿಸಿದ್ದಾರೆ. ತಾವು ಶಾಸಕರಾಗಿ ಶಿಫಾರಸ್ಸು ಮಾಡಿದ ನಿಯಾಮಾವಳಿಗಳ ಪ್ರಕಾರ ಯಾವ ನಷ್ಟವನ್ನು ಪರಿಹಾರ ರೂಪದಲ್ಲಿ ನೀಡಿಲ್ಲವೆಂದು ಶಾಸಕರು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ದೊರಕಿಸಿಕೊಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ತನಗೆ ಕೊಟ್ಟ ಕುದುರೆಯನ್ನು ಒಡಿಸಲಾರದವನು ಇನ್ನೊಬ್ಬರ ಕುದುರೆಯನ್ನು ಬಯಸುವವನು ವೀರನು ಅಲ್ಲ ಶೂರನು ಅಲ್ಲ ಈ ಬಗ್ಗೆ ಶಾಸಕರ ಅಸಮರ್ಥ ಹೇಳಿಕೆಗೆ ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿʼಸೋಜಾರವರು ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago