Featured

ಮಂಗಳೂರು ಶಿರವಸ್ತ್ರ (Scarf) ವಿವಾದ :ವಿದ್ಯಾರ್ಥಿನಿ ಶಿರವಸ್ತ್ರ ಧರಿಸಿದ್ದಕ್ಕೆ ದ್ವಿತೀಯ ವರ್ಷದ ದಾಖಲಾತಿ ನಿರಾಕರಿಸಿದ  ಕಾಲೇಜಿನ ಪ್ರಾಂಶುಪಾಲರು – Vishwanws24

ಮಂಗಳೂರು,: ಶಿರವಸ್ತ್ರ ವಿವಾದ ಮಂಗಳೂರಿನಲ್ಲಿ ಮತ್ತೆ ಸುದ್ದಿಯಾಗಿದೆ. ಈ ವಿವಾದ ಮಂಗಳೂರಿನ ಆಗ್ನೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ.

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿಗೆ ಶಿರವಸ್ತ್ರ ಧರಿಸಿದ್ದಕ್ಕೆ ದ್ವಿತೀಯ ವರ್ಷದ ದಾಖಲಾತಿ ನಿರಾಕರಿಸಿದ ಘಟನೆ ನಗರದ ಸಂತ ಆಗ್ನೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ. ಇದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಬಾರಿ ಪ್ರಥಮ ಪಿಯು ಫಲಿತಾಂಶ ಬಂದ ನಂತರ ದ್ವಿತೀಯ ಪಿಯುಗಾಗಿ ದಾಖಲಾತಿಗೆಂದು ತಾಯಿಯೊಂದಿಗೆ ಕಾಲೇಜಿಗೆ ಹೋದ ಉಡುಪಿ ಜಿಲ್ಲೆಯ ಉಚ್ಚಿಲದ ವಿದ್ಯಾರ್ಥಿನಿ ಫಾತಿಮಾ ಫಾಝಿಲಾಗೆ ಆಘಾತ ಕಾದಿತ್ತು.

ಕಾಲೇಜಿನ ಪ್ರಾಂಶುಪಾಲರು ಶಿರವಸ್ತ್ರ ತೆಗೆದು ಕಾಲೇಜಿಗೆ ಬರುವುದಾದರೆ ದಾಖಲಾತಿ ನೀಡುತ್ತೇವೆ. ಇಲ್ಲದಿದ್ದರೆ ಈ ಕಾಲೇಜಿನಲ್ಲಿ ದಾಖಲಾತಿಗೆ ಅವಕಾಶ ನೀಡುವುವಿಲ್ಲ ಎಂದಿದ್ದಾರೆ. ಇದರಿಂದ ವಿದ್ಯಾರ್ಥಿನಿ ಆಘಾತಕ್ಕೆ ಒಳಗಾಗಿದ್ದಾಳೆ.

ಬಳಿಕ ಹಲವು ಬಾರಿ ಪೋಷಕರೊಂದಿಗೆ ವಿದ್ಯಾರ್ಥಿನಿ ಪ್ರಾಂಶುಪಾಲರನ್ನು ಭೇಟಿಯಾಗಿದ್ದಾರೆ. ಶಿರವಸ್ತ್ರದೊಂದಿಗೆ ದಾಖಲಾತಿಗೆ ಮನವಿ ಮಾಡಿದರೂ ಕೂಡ ಪ್ರಾಂಶುಪಾಲರು ನಿಲುವನ್ನು ಬದಲಾಯಿಸಲಿಲ್ಲ ಎಂದು ಹೇಳಲಾಗಿದೆ. ಕೊನೆಗೆ ಪೋಷಕರು ದಾಖಲಾತಿ ನಿರಾಕರಣೆಗೆ ಲಿಖಿತ ರೂಪದಲ್ಲಿ ಕಾರಣ ನೀಡಿ ಎಂದು ಕೇಳಿಕೊಂಡರೂ ಸ್ಪಂದಿಸದೆ ಟಿಸಿ ಬರೆದು ಕೊಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನೊಂದ ವಿದ್ಯಾರ್ಥಿನಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಅಪರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.ತಾನು ತನ್ನ ಶಿಕ್ಷಣವನ್ನು ಅರ್ಧದಲ್ಲಿ ಮೊಟಕುಗೊಳಿಸುವಂತಾಗಿದ್ದು, ಈ ಬಗ್ಗೆ ಸೂಕ್ತ ನ್ಯಾಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಈ ಕಾಲೇಜಿನ ಪದವಿ ವಿಭಾಗದಲ್ಲಿ ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ನಿಷೇಧಿಸಲಾಗಿತ್ತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago