Featured

ಮಂಗಳೂರು ಶಿರವಸ್ತ್ರ (Scarf) ವಿವಾದ :ವಿದ್ಯಾರ್ಥಿನಿ ಶಿರವಸ್ತ್ರ ಧರಿಸಿದ್ದಕ್ಕೆ ದ್ವಿತೀಯ ವರ್ಷದ ದಾಖಲಾತಿ ನಿರಾಕರಿಸಿದ  ಕಾಲೇಜಿನ ಪ್ರಾಂಶುಪಾಲರು – Vishwanws24

ಮಂಗಳೂರು,: ಶಿರವಸ್ತ್ರ ವಿವಾದ ಮಂಗಳೂರಿನಲ್ಲಿ ಮತ್ತೆ ಸುದ್ದಿಯಾಗಿದೆ. ಈ ವಿವಾದ ಮಂಗಳೂರಿನ ಆಗ್ನೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ.

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿಗೆ ಶಿರವಸ್ತ್ರ ಧರಿಸಿದ್ದಕ್ಕೆ ದ್ವಿತೀಯ ವರ್ಷದ ದಾಖಲಾತಿ ನಿರಾಕರಿಸಿದ ಘಟನೆ ನಗರದ ಸಂತ ಆಗ್ನೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಕಿಗೆ ಬಂದಿದೆ. ಇದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಬಾರಿ ಪ್ರಥಮ ಪಿಯು ಫಲಿತಾಂಶ ಬಂದ ನಂತರ ದ್ವಿತೀಯ ಪಿಯುಗಾಗಿ ದಾಖಲಾತಿಗೆಂದು ತಾಯಿಯೊಂದಿಗೆ ಕಾಲೇಜಿಗೆ ಹೋದ ಉಡುಪಿ ಜಿಲ್ಲೆಯ ಉಚ್ಚಿಲದ ವಿದ್ಯಾರ್ಥಿನಿ ಫಾತಿಮಾ ಫಾಝಿಲಾಗೆ ಆಘಾತ ಕಾದಿತ್ತು.

ಕಾಲೇಜಿನ ಪ್ರಾಂಶುಪಾಲರು ಶಿರವಸ್ತ್ರ ತೆಗೆದು ಕಾಲೇಜಿಗೆ ಬರುವುದಾದರೆ ದಾಖಲಾತಿ ನೀಡುತ್ತೇವೆ. ಇಲ್ಲದಿದ್ದರೆ ಈ ಕಾಲೇಜಿನಲ್ಲಿ ದಾಖಲಾತಿಗೆ ಅವಕಾಶ ನೀಡುವುವಿಲ್ಲ ಎಂದಿದ್ದಾರೆ. ಇದರಿಂದ ವಿದ್ಯಾರ್ಥಿನಿ ಆಘಾತಕ್ಕೆ ಒಳಗಾಗಿದ್ದಾಳೆ.

ಬಳಿಕ ಹಲವು ಬಾರಿ ಪೋಷಕರೊಂದಿಗೆ ವಿದ್ಯಾರ್ಥಿನಿ ಪ್ರಾಂಶುಪಾಲರನ್ನು ಭೇಟಿಯಾಗಿದ್ದಾರೆ. ಶಿರವಸ್ತ್ರದೊಂದಿಗೆ ದಾಖಲಾತಿಗೆ ಮನವಿ ಮಾಡಿದರೂ ಕೂಡ ಪ್ರಾಂಶುಪಾಲರು ನಿಲುವನ್ನು ಬದಲಾಯಿಸಲಿಲ್ಲ ಎಂದು ಹೇಳಲಾಗಿದೆ. ಕೊನೆಗೆ ಪೋಷಕರು ದಾಖಲಾತಿ ನಿರಾಕರಣೆಗೆ ಲಿಖಿತ ರೂಪದಲ್ಲಿ ಕಾರಣ ನೀಡಿ ಎಂದು ಕೇಳಿಕೊಂಡರೂ ಸ್ಪಂದಿಸದೆ ಟಿಸಿ ಬರೆದು ಕೊಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನೊಂದ ವಿದ್ಯಾರ್ಥಿನಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮತ್ತು ಅಪರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.ತಾನು ತನ್ನ ಶಿಕ್ಷಣವನ್ನು ಅರ್ಧದಲ್ಲಿ ಮೊಟಕುಗೊಳಿಸುವಂತಾಗಿದ್ದು, ಈ ಬಗ್ಗೆ ಸೂಕ್ತ ನ್ಯಾಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಈ ಕಾಲೇಜಿನ ಪದವಿ ವಿಭಾಗದಲ್ಲಿ ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ನಿಷೇಧಿಸಲಾಗಿತ್ತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago