ಮಂಗಳೂರು: ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇಂದಿನ ಸ್ಥಿತಿಗತಿ ಕುರಿತು ಕೇಳಿದ ಪ್ರಶ್ನೆಗೆ ಲೋಕಸಭೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉತ್ತರಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ
ಹಾಗಾಗಿ ಸದ್ಯಕ್ಕೆ ಹಾಸನ ಮತ್ತು ದಕ್ಷಿಣ ಕನ್ನಡದ ನಡುವೆ ಸಂಪರ್ಕ ಕಲ್ಪಿಸುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್ನಲ್ಲಿನಿರ್ಮಿಸಲು ಉದ್ದೇಶಿಸಿರುವ ಹಸಿರು ಸುರಂಗ ಮಾರ್ಗ ಯೋಜನೆ ಸಾಧ್ಯವಿಲ್ಲ, ಇದರ ಬದಲಾಗಿ ಶಿರಾಡಿ ಘಾಟ್ನಲ್ಲಿ 26-ಕಿಮೀ ಘಾಟ್ ಸ್ಟ್ರೆಚ್ನಲ್ಲಿ ಚತುಷ್ಪಥ ರಸ್ತೆಗಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲಾಗುತ್ತಿದೆ ಎಂದಿದ್ದಾರೆ.
ಈ ಬಗ್ಗೆ ಶಿರಾಡಿ ಘಾಟ್ ವಿಭಾಗದಲ್ಲಿ ಸುರಂಗಗಳ ನಿರ್ಮಾಣವು ಬೃಹತ್ ಹೂಡಿಕೆಯನ್ನು ಒಳಗೊಂಡಿದೆ. ಆ ಹೂಡಿಕೆಗೆ ಮತ್ತು ಅಲ್ಲಿ ಸುರಂಗದ ಕಾಮಗಾರಿ ಮಾಡಲು ತೊಂದರೆ ಎದುರಾಗಬಹುದು. ಶಿರಾಡಿ ಘಾಟ್ನಲ್ಲಿ ಸದ್ಯಕ್ಕೆ ಅಸ್ತಿತ್ವದಲ್ಲಿರುವ ದ್ವಿಪಥದ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು ಸಚಿವಾಲಯವು ನಿರ್ಧರಿಸಿದೆ. ಇದಕ್ಕಾಗಿ NHAI ಈಗಾಗಲೇ DPR ಸಲಹೆಗಾರರನ್ನು ತೊಡಗಿಸಿಕೊಂಡಿದೆ. ಅದರ ವರದಿ ಪ್ರಗತಿಯಲ್ಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…