ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಮಂಗಳೂರು ನಗರದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆಗೆ ಶಾಸಕ ವೇದವ್ಯಾಸ ಕಾಮತ್ ಮುಂದಾಗಿದ್ದಾರೆ.
ಕೊರೊನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೂ ಪ್ಲಾಸ್ಮಾ ಕೇಂದ್ರ ಸ್ಥಾಪಿಸುವ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಚಿವರೊಂದಿಗೆ ಚರ್ಚಿಸಿ, ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿತರು ಗುಣಮುಖರಾದ ಮೇಲೆ ಅವರ ರಕ್ತದ ದ್ರವ ಭಾಗವನ್ನು ಶೇಖರಿಸಿ ಚಿಕಿತ್ಸೆ ನೀಡುವ ವಿಧಾನವನ್ನು ಕರ್ನಾಟಕದಲ್ಲಿ ಈಗಾಗಲೇ ಪ್ರಾರಂಭಿಸಲಾಗಿದೆ. ಸೋಂಕಿತ ವ್ಯಕ್ತಿಯು ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ದೇಹದಿಂದ ಪ್ಲಾಸ್ಮಾ ಸಂಗ್ರಹಿಸಿ ರೋಗಿಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯನ್ನು ಮಂಗಳೂರಿನಲ್ಲಿ ಅಳವಡಿಸಬೇಕು. ಒಬ್ಬ ವ್ಯಕ್ತಿಯಿಂದ ಸಂಗ್ರಹಿಸುವ ಪ್ಲಾಸ್ಮಾದಿಂದ ಗರಿಷ್ಠ 5 ಜನರಿಗೆ ಚಿಕಿತ್ಸೆ ನೀಡಬಹುದು ಎನ್ನುವುದನ್ನು ಈಗಾಗಲೇ ಅಧ್ಯಾಯನದ ಮೂಲಕ ಕಂಡು ಹಿಡಿಯಲಾಗಿದೆ. ಹಾಗಾಗಿ ಸೋಂಕಿತರನ್ನು ಗುಣಪಡಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಬಹುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವಿಚಾರವಾಗಿ ಜಿಲ್ಲಾಧಿಕಾರಿ ಹಾಗೂ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಚಿವರ ಗಮನಕ್ಕೂ ತರಲಾಗಿದೆ ಎಂದು ಶಾಸಕರು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…