Categories: ಉಡುಪಿ

ಮಂಗಳೂರು : ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಸರಳ ಆಚರಣೆ : ಜಿಲ್ಲಾಧಿಕಾರಿ ಆದೇಶ -Vishwanews24

ಮಂಗಳೂರು : ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಸರಳ ಆಚರಣೆ : ಜಿಲ್ಲಾಧಿಕಾರಿ ಆದೇಶ -Vishwanews24

ಮಂಗಳೂರು, : ಮಂಗಳೂರು ತಾಲೂಕಿನ ಪಾಂಡೇಶ್ವರದಲ್ಲಿರುವ ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜನವರಿ 3 ರಿಂದ ಜನವರಿ 8 ರವರೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಬ್ರಹ್ಮಕಲಶೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ವಯ ಸರಳವಾಗಿ ನೆರವೇರಿಸಲು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಎರಡನೇ ಕೋವಿಡ್-19 ಅಲೆಯನ್ನು ತಡೆಯಲು ಸಾರ್ವಜನಕ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ಮನಗಂಡು ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

ಕಾರ್ಯಕ್ರಮದ ಆಯೋಜಕರು ದೇವಸ್ಥಾನದ ಆಡಳಿತಾಧಿಕಾರಿಯವರು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಪಾಲನೆಗೆ ಕ್ರಮ ಕೈಗೊಳ್ಳಬೇಕು. ಕೊವೀಡ್-19 ಮಾರ್ಗಸೂಚಿಗಳು ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೊಜಕರು ಅಥವಾ ದೇವಸ್ಥಾನದ ಆಡಳಿತಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.

ಮುಖಗವಸನ್ನು ಧರಿಸದೇ ಇರುವ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು. ದೇವಾಲಯ ಪ್ರವೇಶಕ್ಕೆ ಹಾಗೂ ನಿರ್ಗಮನಕ್ಕೆ ಸೂಕ್ತ ವ್ಯವಸ್ಥೆಗಳನ್ನು ಮಾಡುವುದು ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಲು ಅಗತ್ಯ ವ್ಯವಸ್ಥೆ ಮಾಡಬೇಕು.

ದೇವಾಲಯದ ಪ್ರವೇಶದಲ್ಲಿ ಹಾಗೂ ನಿರ್ಗಮನದಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಕೈ ತೊಳೆಯುವುದು ಮತ್ತು ಸ್ಯಾನಿಟೈಸರ್‍ಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಉತ್ಸವಾಚರಣೆ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು.

65 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ವ್ಯಕ್ತಿಗಳು, ಬಹು ಅಸ್ಥಿತ್ವತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತ್ತು ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತು ಪಡಿಸಿ ಮನೆಯಲ್ಲಿಯೇ ಇರಬೇಕು.

ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಇತರೆ ಇಲಾಖೆ ಅಥವಾ ಪಾಲಿಕೆ ಅಥವಾ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ರಾಷ್ರ್ಟೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು. ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago