ಮಂಗಳೂರು(Vishwanews24 ): ಶೂ ಮತ್ತು ಶರ್ಟ್ ಬಟನ್ನಲ್ಲಿ ಚಿನ್ನವನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕಾಸರಗೋಡು ಮೂಲದ ಅಬ್ದುಲ್ ಸಲಾಮ್ ಮಣಿಪಾರಂಬು ಮತ್ತು ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಅಬ್ದುಲ್ ಸಲಾಮ್ ಅವರು ಶಾರ್ಜಾದಿಂದ ಬರುತ್ತಿದ್ದ ಇಂಡಿಗೋ ವಿಮಾನ, ಹಾಗೂ ಅಶ್ರಫ್ ಅವರು ದುಬೈನಿಂದ ಬರುವ ಏರ್ ಇಂಡಿಯಾ ವಿಮಾನದಿಂದ ಬಂದಿಳಿದಿದ್ದು, ಜೀನ್ಸ್ ಅಂಗಿ ಗುಂಡಿ ಚಿನ್ನವನ್ನು ಮರೆಮಾಚುವ ಮೂಲಕ ಮತ್ತು ಶೂಗಳಲ್ಲಿ ಚಿನ್ನದ ಸರಪಣಿಗಳನ್ನು ಇಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.
ಬಂಧಿತರಿಂದ 26,43,840 ರೂ.ಗಳ ಮೌಲ್ಯದ, 576 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.ಕಾರ್ಯಾಚರಣೆಯ ನೇತೃತ್ವವನ್ನು ಪ್ರವೀಣ್ ಕಂಡಿ, ರಾಕೇಶ್, ಸಿ.ಎಂ. ಮೀನಾ ಮತ್ತು ಆಶಿಶ್ ವರ್ಮಾ ವಹಿಸಿದ್ದರು.
ಉಡುಪಿ:ಗಿರಿಜಾ ಅತ್ತಿಗೇರಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪಿ.ಎಚ್.ಡಿ ಪ್ರದಾನ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…