Judge and gavel in courtroom
ಮಂಗಳೂರು: ಮಂಗಳೂರಿನಲ್ಲಿ 2019ರಲ್ಲಿ ನಡೆದಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ (ಸೆ .24) ತೀರ್ಪು ನೀಡಿದ್ದಾರೆ.
ಜೋನಸ್ ಸ್ಯಾಮ್ಸನ್ ಮತ್ತು ಆಕೆಯ ಪತ್ನಿ ವಿಕ್ಟೋರಿಯಾ ಮಥಾಯಸ್ ಜೀವಾವಧಿ ಶಿಕ್ಷೆಗೊಳಗಾದವರು. ಇವರಿಗೆ ಸಹಕರಿಸಿದ ಇನ್ನೋರ್ವ ಆರೋಪಿ ರಾಜು ಎಂಬಾತನಿಗೆ ಆರೂವರೆ ತಿಂಗಳ ಸಾದಾ ಸಜೆ ವಿಧಿಸಲಾಗಿದೆ.
ಕುರಿ ಚಿಟ್ ಫಂಡ್ ನಡೆಸುತ್ತಿದ್ದ ನಗರದ ಅತ್ತಾವರದ ಶ್ರೀಮತಿ ಶೆಟ್ಟಿಯವರಿಗೆ ಸೂಟರ್ ಪೇಟೆಯ ಜೋನಸ್ ನೀಡಬೇಕಾಗಿದ್ದ ಹಣವನ್ನು ಕೇಳಲು ಆತನ ಮನೆಗೆ ಹೋಗಿದ್ದಾಗ ಜೋನಸ್ ಮತ್ತು ವಿಕ್ಟೋರಿಯಾ ಆಕೆಯನ್ನು ಕೊಲೆ ಮಾಡಿದ್ದರು. ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು. ಬಳಿಕ ದೇಹವನ್ನು 29 ತುಂಡುಗಳನ್ನಾಗಿ ಮಾಡಿದ್ದರು. ಅದನ್ನು ರಾತ್ರಿ ಜೋನಸ್ ನಗರದ ಹಲವೆಡೆ ಎಸೆದು ಹೋಗಿದ್ದ.
ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…