Judge and gavel in courtroom
ಮಂಗಳೂರು: ಮಂಗಳೂರಿನಲ್ಲಿ 2019ರಲ್ಲಿ ನಡೆದಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ (ಸೆ .24) ತೀರ್ಪು ನೀಡಿದ್ದಾರೆ.
ಜೋನಸ್ ಸ್ಯಾಮ್ಸನ್ ಮತ್ತು ಆಕೆಯ ಪತ್ನಿ ವಿಕ್ಟೋರಿಯಾ ಮಥಾಯಸ್ ಜೀವಾವಧಿ ಶಿಕ್ಷೆಗೊಳಗಾದವರು. ಇವರಿಗೆ ಸಹಕರಿಸಿದ ಇನ್ನೋರ್ವ ಆರೋಪಿ ರಾಜು ಎಂಬಾತನಿಗೆ ಆರೂವರೆ ತಿಂಗಳ ಸಾದಾ ಸಜೆ ವಿಧಿಸಲಾಗಿದೆ.
ಕುರಿ ಚಿಟ್ ಫಂಡ್ ನಡೆಸುತ್ತಿದ್ದ ನಗರದ ಅತ್ತಾವರದ ಶ್ರೀಮತಿ ಶೆಟ್ಟಿಯವರಿಗೆ ಸೂಟರ್ ಪೇಟೆಯ ಜೋನಸ್ ನೀಡಬೇಕಾಗಿದ್ದ ಹಣವನ್ನು ಕೇಳಲು ಆತನ ಮನೆಗೆ ಹೋಗಿದ್ದಾಗ ಜೋನಸ್ ಮತ್ತು ವಿಕ್ಟೋರಿಯಾ ಆಕೆಯನ್ನು ಕೊಲೆ ಮಾಡಿದ್ದರು. ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು. ಬಳಿಕ ದೇಹವನ್ನು 29 ತುಂಡುಗಳನ್ನಾಗಿ ಮಾಡಿದ್ದರು. ಅದನ್ನು ರಾತ್ರಿ ಜೋನಸ್ ನಗರದ ಹಲವೆಡೆ ಎಸೆದು ಹೋಗಿದ್ದ.
ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…