Judge and gavel in courtroom
ಮಂಗಳೂರು: ಮಂಗಳೂರಿನಲ್ಲಿ 2019ರಲ್ಲಿ ನಡೆದಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ (ಸೆ .24) ತೀರ್ಪು ನೀಡಿದ್ದಾರೆ.
ಜೋನಸ್ ಸ್ಯಾಮ್ಸನ್ ಮತ್ತು ಆಕೆಯ ಪತ್ನಿ ವಿಕ್ಟೋರಿಯಾ ಮಥಾಯಸ್ ಜೀವಾವಧಿ ಶಿಕ್ಷೆಗೊಳಗಾದವರು. ಇವರಿಗೆ ಸಹಕರಿಸಿದ ಇನ್ನೋರ್ವ ಆರೋಪಿ ರಾಜು ಎಂಬಾತನಿಗೆ ಆರೂವರೆ ತಿಂಗಳ ಸಾದಾ ಸಜೆ ವಿಧಿಸಲಾಗಿದೆ.
ಕುರಿ ಚಿಟ್ ಫಂಡ್ ನಡೆಸುತ್ತಿದ್ದ ನಗರದ ಅತ್ತಾವರದ ಶ್ರೀಮತಿ ಶೆಟ್ಟಿಯವರಿಗೆ ಸೂಟರ್ ಪೇಟೆಯ ಜೋನಸ್ ನೀಡಬೇಕಾಗಿದ್ದ ಹಣವನ್ನು ಕೇಳಲು ಆತನ ಮನೆಗೆ ಹೋಗಿದ್ದಾಗ ಜೋನಸ್ ಮತ್ತು ವಿಕ್ಟೋರಿಯಾ ಆಕೆಯನ್ನು ಕೊಲೆ ಮಾಡಿದ್ದರು. ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು. ಬಳಿಕ ದೇಹವನ್ನು 29 ತುಂಡುಗಳನ್ನಾಗಿ ಮಾಡಿದ್ದರು. ಅದನ್ನು ರಾತ್ರಿ ಜೋನಸ್ ನಗರದ ಹಲವೆಡೆ ಎಸೆದು ಹೋಗಿದ್ದ.
ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…