ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ದೋಣಿ ದುರಂತಕ್ಕೆ ಸಂಬಂಧಿಸಿ ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸದನದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ 25 ಜನರಿದ್ದ ಶ್ರೀರಕ್ಷಾ ಹೆಸರಿನ ದೋಣಿ ಮುಳುಗಡೆಯಾಗಿ 19 ಜನರು ಪ್ರಾಣಾಪಾಯದಿಂದ ಪಾರಾಗಿ 6 ಜನರು ಮೃತಪಟ್ಟಿದ್ದರು. ಈ ಘಟನೆಯ ಕುರಿತು ಸದನದಲ್ಲಿ ಮಾತನಾಡಿದ ಶಾಸಕ ಕಾಮತ್ 6 ಜನರಲ್ಲಿ ಒಬ್ಬರ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ಮೃತದೇಹದ ಶೋಧ ಕಾರ್ಯ ನಡೆಯುತ್ತಿದೆ ಎಂದರು.
ಈಗಾಗಲೇ ಮೀನುಗಾರಿಕಾ ಇಲಾಖೆಯು ಮೃತರ ಕುಟುಂಬಗಳಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ಧನವನ್ನು ಸಂಸದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನೀಡಲಾಗಿದೆ. ಬೇರೆಡೆಗಳಲ್ಲಿ ಸಂಭವಿಸಿದ ದೋಣಿ ದುರಂತ ಘಟನೆಗಳಲ್ಲಿ 10 ಲಕ್ಷದ ವರೆಗೆ ಪರಿಹಾರ ನೀಡಲಾಗಿದೆ. ಹಾಗಾಗಿ ಸರ್ಕಾರವು ಮುತುವರ್ಜಿ ವಹಿಸಿ ಹೆಚ್ಚಿನ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡರು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್, ಮೀನುಗಾರಿಕಾ ಸಚಿವರು ಹಾಗೂ ಸರ್ಕಾರದ ಜೊತೆ ಈ ಕುರಿತು ಚರ್ಚಿಸಲಾಗುವುದು ಎಂದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…