Featured

ಮಂಗಳೂರು: ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಗಲುವಿಕೆಯು ಅಪಾರ ಭಕ್ತಸಮೂಹಕ್ಕೆ ಆಘಾತ ಉಂಟು ಮಾಡಿದೆ : ನಳಿನ್‍ಕುಮಾರ್ ಸಂತಾಪ – Vishwanews24

ಮಂಗಳೂರು: ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಗಲುವಿಕೆಯು ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ : ನಳಿನ್‍ಕುಮಾರ್  ಸಂತಾಪ

ಮಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು. ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿದೆ. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ದೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದವರು. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು. ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತಿರುತ್ತಿದ್ದರು. ಸೂಜಿಗಲ್ಲಿನಂತಹ ಸೆಳೆತ, ಅವರು ಭಾಷೆ, ಧಾಟಿ, ಪದಪ್ರಯೋಗ, ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುತ್ತಿದ್ದರು ಎಂದು ವಿವರಿಸಿದ್ದಾರೆ. ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರಿಸಿಕೊಂಡು ಬರುತ್ತಿದ್ದರು. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ದಾಸ ವಾಣಿಯಂತೆ ಅವರು ನಡೆದವರು ಎಂದಿದ್ದಾರೆ.

ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಞಾನವನ್ನು ಬಳಸಿಕೊಂಡು ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದರು. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯವಾಗಿತ್ತು. ಅವರ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತಿದ್ದವು. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು ಎಂದು ತಿಳಿಸಿದ್ದಾರೆ.

ಅವರು ವಚನಗಳ ಬಗ್ಗೆ ಹೊಸ ಬೆಳಕನ್ನು ಚೆಲ್ಲಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದವರು. ಅವರು ಜೀವನವನ್ನು ಆಧ್ಯಾತ್ಮಿಕತೆಗೆ ಮೀಸಲಿಟ್ಟಿದ್ದಾರೆ ಮತ್ತು ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಅವರ ಪುಸ್ತಕಗಳು ನಮಗೆ ಮಾರ್ಗದರ್ಶನ ನೀಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಅನ್ನು ನಯವಾಗಿಯೇ ನಿರಾಕರಿಸಿದ್ದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಕೈಗನ್ನಡಿ ಎಂದು ಅವರು ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago