ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಭಾನುವಾರ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್ನ ಅಗತ್ಯವಿತ್ತು ಎಂದು ಹೇಳಲಾಗಿದೆ. ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸನೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡ ಹೊಂದಾಣಿಕೆಯಾಗಿರಲಿಲ್ಲ. ಆದರೆ ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗಾಗಿ ಅರ್ಚನಾ ಲಿವರ್ ಭಾಗದ ದಾನಕ್ಕೆ ಒಪ್ಪಿದ್ದರು. ಅದರಂತೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾರ ಲಿವರ್ನ ಭಾಗಶಃ ಭಾಗ ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆದಿತ್ತು. ಅಲ್ಲದೆ ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆ ಕೂಡ ಹೊಂದಿದ್ದರು.
4 ದಿನಗಳ ಹಿಂದೆ ಅರ್ಚನಾ ಏಕಾಏಕಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾವನ್ನಪ್ಪಿದ್ದಾರೆ. ಇನ್ನು ಅರ್ಚನಾರಿಂದ ಲಿವರ್ ದಾನ ಪಡೆದ ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಇನ್ನು ಅರ್ಚನಾ ಅವರ ಹಠಾತ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅರ್ಚನಾ ಅವರು ನಗರದ ಕೆನರಾ ಕಾಲೇಜಿನಲ್ಲಿ ಈ ಮೊದಲು ಉಪನ್ಯಾಸಕಿಯಾಗಿದ್ದರು. ಬಳಿಕ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅರ್ಚನಾ ಪತಿ ಸಿಎ ಚೇತನ್ ಕಾಮತ್ ಮತ್ತು 4 ವರ್ಷ ಪ್ರಾಯದ ಪುತ್ರನನ್ನು ಅಗಲಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…