ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಭಾನುವಾರ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್ನ ಅಗತ್ಯವಿತ್ತು ಎಂದು ಹೇಳಲಾಗಿದೆ. ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ತಪಾಸನೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡ ಹೊಂದಾಣಿಕೆಯಾಗಿರಲಿಲ್ಲ. ಆದರೆ ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗಾಗಿ ಅರ್ಚನಾ ಲಿವರ್ ಭಾಗದ ದಾನಕ್ಕೆ ಒಪ್ಪಿದ್ದರು. ಅದರಂತೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾರ ಲಿವರ್ನ ಭಾಗಶಃ ಭಾಗ ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆದಿತ್ತು. ಅಲ್ಲದೆ ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆ ಕೂಡ ಹೊಂದಿದ್ದರು.
4 ದಿನಗಳ ಹಿಂದೆ ಅರ್ಚನಾ ಏಕಾಏಕಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾವನ್ನಪ್ಪಿದ್ದಾರೆ. ಇನ್ನು ಅರ್ಚನಾರಿಂದ ಲಿವರ್ ದಾನ ಪಡೆದ ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಇನ್ನು ಅರ್ಚನಾ ಅವರ ಹಠಾತ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅರ್ಚನಾ ಅವರು ನಗರದ ಕೆನರಾ ಕಾಲೇಜಿನಲ್ಲಿ ಈ ಮೊದಲು ಉಪನ್ಯಾಸಕಿಯಾಗಿದ್ದರು. ಬಳಿಕ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅರ್ಚನಾ ಪತಿ ಸಿಎ ಚೇತನ್ ಕಾಮತ್ ಮತ್ತು 4 ವರ್ಷ ಪ್ರಾಯದ ಪುತ್ರನನ್ನು ಅಗಲಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…