ಮಂಗಳೂರು : ಹಿಂದೂ ನಾಯಕ, ಬಿಲ್ಲವ ಮುಖಂಡ ಸತ್ಯಜಿತ್ ಸುರತ್ಕಲ್ ಅವರ ಗನ್ ಮ್ಯಾನ್ ಭದ್ರತೆಯನ್ನು ಮುಂದುವರೆಸಬೇಕೆಂದು ಮನವಿ ನೀಡಲು ಮುಂದಾದ ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ನೇತ್ರತ್ವದ ನಿಯೋಗ ಮನವಿ ಸ್ವೀಕರಿಸಲು ಮಂಗಳೂರು ಪೊಲೀಸ್ ಕಮಿಷನರ್ ನಿರಾಕರಿಸಿದ್ದಾರೆ.
ಸರಕಾರ ತನ್ನ ಆದೇಶವನ್ನು ಪುನರ್ ಪರಿಶೀಲಿಸಿ ಗನ್ ಮ್ಯಾನ್ ಭದ್ರತೆಯನ್ನು ಮುಂದುವರಿಸ ಬೇಕೆಂದು ಮಂಗಳೂರಿನ ರಾಷ್ಟ್ರ ಭಕ್ತ ವೇದಿಕೆ ಮತ್ತು ದಕ್ಷಿಣ ಕನ್ನಡ ವುಶು ಅಸೋಸಿಯೇಶನ್ ಪರವಾಗಿ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ನೇತ್ರತ್ವದ ನಿಯೋದ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿತ್ತು.
ಕನಿಷ್ಟ 5 ಜನರ ನಿಯೋಗದೊಂದಿಗೆ ತೆರಳಿ ಮನವಿ ಸಲ್ಲಿಸಲು ಅವಕಾಶ ಕೊಡಿ ಎಂದು ಬೇಡಿಕೊಂಡರೂ ಪೊಲೀಸ್ ಆಯುಕ್ತರು ಸಮ್ಮತಿಸಿಲ್ಲ ಎಂದು ಪ್ರಸನ್ನ ರವಿ ಆರೋಪಿಸಿದ್ದಾರೆ.
ಮಾದ್ಯಮಗಳ ಬಳಿ ಮಾತನಾಡಿ ಅವರು ಪೊಲೀಸ್ ಆಯುಕ್ತರು ಒಬ್ಭರೇ ಬಂದು ಮನವಿ ಕೊಡುವುದಾದರೆ ಮಾತ್ರ ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ಫೋಟೊ ತೆಗೆಯಲು ಅವಕಾಶ ನಿರಾಕರಿಸಿದ್ದಾರೆ ಎಂದು ಪ್ರಸನ್ನ ರವಿ ಆರೋಪಿಸಿದರು.
ಪೊಲೀಸ್ ಆಯುಕ್ತರ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಸನ್ನ ರವಿ ಆಡಳಿತ ನಡೆಸುವ ಸರಕಾರದ ಜತೆ ಪೊಲೀಸರೂ ಶಾಮೀಲಾಗಿದ್ದಾರೆಯೇ ಎಂಬ ಸಂಶಯ ಬರುತ್ತಿದೆ. ಹಣ ಕೊಟ್ಟು ಭದ್ರತೆ ಪಡೆಯಬೇಕೆಂದು ಆಯುಕ್ತರು ಹೇಳುತ್ತಾರೆ.
ಅಂದರೆ ಹಣ ಕೊಟ್ಟರೆ ಟೆರರಿಸ್ಟ್ ಗಳಿಗೂ ಗನ್ ಮ್ಯಾನ್ ಭದ್ರತೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು.ಸರಕಾರ ಮತ್ತು ಪೊಲೀಸ್ ಇಲಾಖೆಯ ಈ ಕ್ರಮದ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…