ಮಂಗಳೂರು,: ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆಯ ಆಯುಷ್ ವಿಭಾಗದಲ್ಲಿ ಇಂದು ಹಿರಿಯ ಹಾಗೂ 45 ವರ್ಷ ಮೇಲ್ಪಟ್ಟ ಬಿಪಿ, ಶುಗರ್ ಹೊಂದಿರುವ ಪತ್ರಕರ್ತರಿಗೆ ಪ್ರಥಮ ಸುತ್ತಿನ ಲಸಿಕೆಗೆ ಚಾಲನೆ ಹಾಗೂ ತಾವು ಎರಡನೇ ಸುತ್ತಿನ ಲಸಿಕೆಯನ್ನು ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡುತ್ತಿದ್ದರು.
ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ, ದಂಡ ವಿಧಿಸುವ ಪ್ರಕ್ರಿಯೆಯನ್ನೂ ನಡೆಸುವ ಅಗತ್ಯವಿದೆ. ಗಡಿ ಪ್ರದೇಶಗಳಲ್ಲಿ ನಿತ್ಯ ಓಡಾಡುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ ಅನಗತ್ಯವಾಗಿ ಸಂಚರಿಸುವವರ ಮೇಲೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಬಿಎಂಪಿ ಮಾರ್ಶಲ್ಸ್ ಮಾದರಿಯಲ್ಲಿ ಮನಪಾ ವ್ಯಾಪ್ತಿಯಲ್ಲಿ ಹೋಂಗಾರ್ಡ್ಗಳನ್ನು ಬಳಸಿಕೊಂಡು ಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಆರಂಭದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಈ ವಿಧಾನ ಅನುಸರಿಸರಿಸಲಾಗುವುದು. ಬಳಿಕ ಜಿಲ್ಲೆಯ ಇತರ ಭಾಗಗಳಿಗೂ ವಿಸ್ತರಿಸಲಾಗುವುದು. ಜನಸಂದಣಿ ಇರುವ ಪ್ರದೇಶಗಳು, ಗಡಿ ಭಾಗ, ಬಸ್ ನಿಲ್ದಾಣ, ಸಭೆ ಸಮಾರಂಭಗಳಲ್ಲಿ ಜಿಲ್ಲಾಡಳಿತದಿಂದ ನಿಯೋಜಿಸಲಾದ ಹೋಂಗಾರ್ಡ್ಗಳು ಜಾಗೃತಿ ಮೂಡಿಸುವ, ಪರೀಶಿಲನೆ, ತಪಸಾಣೆ ನಡೆಸುವ ಕೆಲಸ ಮಾಡಲಿದ್ದಾರೆ. ಬಸ್ಸುಗಳನ್ನು ನಿಲ್ಲಿಸಿ ಜನರಿಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ. ಇಂದು ಸರಕಾರದ ಮುಖ್ಯ ಕಾರ್ಯದರ್ಶಿ ಜತೆಗಿನ ವೀಡಿಯೋ ಕಾನ್ಫರೆನ್ಸ್ ಸಂದರ್ಭ ಹೆಚ್ಚುವರಿಯಾಗಿ 30ರಷ್ಟು ಹೋಂಗಾರ್ಡ್ಗಳ ನಿಯೋಜನೆಗೆ ಅನುಮತಿ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…