ಮಂಗಳೂರು : ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು,ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ ಮತ್ತು ಪ್ರತಿಕ್ರಿಯೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಮುಖ್ಯಮಂತ್ರಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ’ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಸಮಾಜದಲ್ಲಿ ನಾವೆಲ್ಲ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ,ಇದು ಬಹಳ ಸೂಕ್ಷ್ಮವಾಗಿರುವ ವಿಚಾರ. ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು, ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ ಮತ್ತು ಪ್ರತಿಕ್ರಿಯೆ ಆಗುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
‘ಕಾನೂನು ಸುವ್ಯವಸ್ಥೆ ಜೊತೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರಕಾರದ ಕರ್ತವ್ಯ. ಯುವಕರು ಸಹ ಸಾಮಾಜಿಕ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕುವುದಕ್ಕೆ ಆಗುವುದಿಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ನಮ್ಮ ನೈತಿಕತೆ ಮೇಲೆ ಇದೆ. ಇಲ್ಲಿ ಪ್ರತಿಯೊಬ್ಬರದ್ದು ಹೊಣೆಗಾರಿಕೆ ಇದೆ’ ಎಂದರು.
ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ – Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…