Featured

ಮಂಗಳೂರು : ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು,ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು : ಸಿಎಂ. ಬೊಮ್ಮಾಯಿ – Vishwanews24

ಮಂಗಳೂರು : ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು,ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು : ಸಿಎಂ. ಬೊಮ್ಮಾಯಿ – Vishwanews24

ಮಂಗಳೂರು : ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು,ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ ಮತ್ತು ಪ್ರತಿಕ್ರಿಯೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಮುಖ್ಯಮಂತ್ರಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ’ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಸಮಾಜದಲ್ಲಿ ನಾವೆಲ್ಲ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ,ಇದು ಬಹಳ ಸೂಕ್ಷ್ಮವಾಗಿರುವ ವಿಚಾರ. ಸಮಾಜದಲ್ಲಿ ಹಲವಾರು ಭಾವನೆಗಳು ಇದ್ದು, ಅವುಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ ಮತ್ತು ಪ್ರತಿಕ್ರಿಯೆ ಆಗುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ಕಾನೂನು ಸುವ್ಯವಸ್ಥೆ ಜೊತೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರಕಾರದ ಕರ್ತವ್ಯ. ಯುವಕರು ಸಹ ಸಾಮಾಜಿಕ ಭಾವನೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕುವುದಕ್ಕೆ ಆಗುವುದಿಲ್ಲ. ನಮ್ಮೆಲ್ಲ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ನಮ್ಮ ನೈತಿಕತೆ ಮೇಲೆ ಇದೆ. ಇಲ್ಲಿ ಪ್ರತಿಯೊಬ್ಬರದ್ದು ಹೊಣೆಗಾರಿಕೆ ಇದೆ’ ಎಂದರು.

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ – Vishwanews24

 

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

14 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago