Featured

ಮಂಗಳೂರು: ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನದ ಬಳೆ ಅಡವಿಟ್ಟು 2.11 ಕೋ.ರೂ. ಸಾಲ ಪಡೆದು ವಂಚನೆ – vishwanews24

ಬ್ಯಾಂಕ್ ಆಡಳಿತ ಮಂಡಳಿ, ಚಿನ್ನ ಪರೀಕ್ಷಕ ಸಹಿತ 28 ಮಂದಿಯ ವಿರುದ್ಧ ಪ್ರಕರಣ ದಾಖಲು, ಓರ್ವನ ಬಂಧನ

ಮಂಗಳೂರು: ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ ಮಂಗಳೂರಿನ ಪಡೀಲ್ ಶಾಖೆಯಲ್ಲಿ ವ್ಯಕ್ತಿಯೊಬ್ಬರಿಗೆ ಆಭರಣ ಈಡಿನ ಆಧಾರದಲ್ಲಿ 2,11,89,800 ರೂ. ಸಾಲ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಈ ಸಹಕಾರಿ ಸಂಘದ ಅಧ್ಯಕ್ಷ, ನಿರ್ದೇಶಕ, ಶಾಖೆಯ ಪ್ರಭಾರ ವ್ಯವಸ್ಥಾಪಕ ಸಹಿತ 28 ಮಂದಿಯ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿ, ಸಹಕಾರಿ ಸಂಘದ ಸರಪ್ (ಚಿನ್ನ ಪರೀಕ್ಷಕ) ವಿವೇಕ್ ಆಚಾರ್ಯರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ದೂರುದಾರರಾದ ಸಂಘದ ಮಾಜಿ ನಿರ್ದೇಶಕ ಲೋಕನಾಥ ಡಿ. ತಿಳಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಪ್ರಕರಣದ ಬಗ್ಗೆ ಅವರು ಮಾಹಿತಿ ನೀಡಿದರು.

ಪುತ್ತೂರು ಈಶ್ವರಮಂಗಳ ನಿವಾಸಿ, ಪ್ರಕರಣದ ಪ್ರಮುಖ ಆರೋಪಿ ಅಬೂಬಕರ್ ಸಿದ್ದೀಕ್ ಎಂಬಾತ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 2,22,89,800 ರೂ. ಸಾಲ ಪಡೆದಿದ್ದಾನೆ. ಈ ಚಿನ್ನಾಭರಣವನ್ನು ಪರಿಶೀಲಿಸಿದ ಸಂಘದ ಸರಪ್ ವಿವೇಕ್ ಆಚಾರ್ಯ ಅದು ನೈಜ ಚಿನ್ನವೆಂದು ದೃಢೀಕರಿಸಿದ್ದಾರೆ. ಸಂಘದ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಪ್ರಧಾನ ವ್ಯವಸ್ಥಾಪಕರ ನಿರ್ದೇಶನದಂತೆ ಶಾಖೆಯ ಪ್ರಭಾರ ವ್ಯವಸ್ಥಾಪಕ ಪ್ರಶಾಂತ್ ಈ ಭಾರೀ ಮೊತ್ತದ ಸಾಲವನ್ನು ನೀಡಿದ್ದರು ಎಂದು ಆರೋಪಿಸಿದರು.

ಈ ಸಾಲವನ್ನು 2023ರ ನವೆಂಬರ್ 13ರಿಂದ 2024ರ ಫೆಬ್ರವರಿ 3ರ ಅವಧಿಯಲ್ಲಿ ನೀಡಲಾಗಿತ್ತು. ಈ ವರ್ಷದ ಫೆಬ್ರವರಿ ಮೊದಲ ವಾರದಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು, ಸಂಘದ ಹಿರಿಯ ಸದಸ್ಯರು ಮೈಸೂರಿನ ನಿಬಂಧಕರಿಗೆ ಎಪ್ರಿಲ್ 10ರಂದು ದೂರು ಅರ್ಜಿಯನ್ನು ಸಲ್ಲಿಸಿದ್ದರು. ಬಳಿಕ ಜುಲೈ 1ರಂದು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೂ ದೂರು ಸಲ್ಲಿಸಲಾಗಿತ್ತು. ಮೈಸೂರು ನಿಬಂಧಕರು, ದ.ಕ. ಉಸ್ತುವಾರಿ ಸಚಿವರು ಹಾಗೂ ದ.ಕ. ಜಿಲ್ಲಾಧಿಕಾರಿಯವರು ಮಂಗಳೂರು ಉಪ ನಿಬಂಧಕರಿಗೆ ನೋಟಿಸ್ ಜಾರಿ ಮಾಡಿ ತನಿಖೆಗೆ ಆದೇಶಿಸಿದ್ದರು. ಆದರೆ ಮಂಗಳೂರು ಉಪ ನಿಬಂಧಕರು ನಮಗೆ ಹೇಳಿಕೆ ದಾಖಲಿಸಲು ಅವಕಾಶ ನೀಡದೆ ಶಾಸನಬದ್ಧ ತನಿಖೆಗೆ ಶಿಫಾರಸು ಮಾಡಿ ತನಿಖೆ ಮುಕ್ತಾಯಗೊಳಿಸಿ ಹಿಂಬರಹ ನೀಡಿದ್ದರು. ಪೊಲೀಸ್ ವರಿಷ್ಠಾಧಿಕಾರಿಯವರು ಆರೋಪಿಗಳ ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಆರೋಪ ನಿರಾಕರಿಸಿ ಸುಳ್ಳು ಹೇಳಿಕೆ ನೀಡಿದ್ದರು. ಬಳಿಕ ಪ್ರಕರಣ ಕಮಿಷನರೇಟ್ ವ್ಯಾಪ್ತಿಗೆ ಬರುವುದಾಗಿ ಹೇಳಿ ನ್ಯಾಯಾಲಯದಲ್ಲಿ ಸಮಸ್ಯೆ ಬಗೆಹರಿಸುವಂತೆ ತಿಳಿಸಲಾಗಿತ್ತು. ಈ ನಡುವೆ ನಕಲಿ ಚಿನ್ನಾಭರಣದ ಹರಾಜು ಪ್ರಕ್ರಿಯೆ ಗುಪ್ತ ಸ್ಥಳದಲ್ಲಿ ನಡೆಸಲಾಗಿತ್ತು. ಒಟ್ಟು ಸಾಲದಲ್ಲಿ 1.31 ಕೋಟಿ ರೂ. ಬಾಕಿ ಇದ್ದು, ಸಂಘದ ನಿಯಮದ ಪ್ರಕಾರ ಸಾಲಗಾರರೊಬ್ಬರಿಗೆ ಒಂದು ದಿನದಲ್ಲಿ 20 ಲಕ ರೂ. ಮಾತ್ರ ಚಿನ್ನಾಭರಣ ಸಾಲ ನೀಡಬಹುದಾಗಿದ್ದರೂ ನಿಯಮ ಉಲ್ಲಂಘಿಸಲಾಗಿದೆ. ಪ್ರಕರಣದ ಬಗ್ಗೆ ಕಮಿಷನರ್ ರನ್ನು ಭೇಟಿಯಾಗಿ ವಿವರಿಸಿದ ಬಳಿಕ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

ಪ್ರಕರಣಕ್ಕೆ ಸಂಬಂಧಿಸಿ 2ನೇ ಆರೋಪಿ ವಿವೇಕ್ ಆಚಾರ್ಯರ ಬಂಧನವಾಗಿದೆ ಎಂದವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಹಿರಿಯ ಸದಸ್ಯರಾದ ಸೇಸಪ್ಪ ಟಿ. ಸೋಮಯ್ಯ ಎಚ್., ಸುಂದರ ಬಿ., ರಮೇಶ್ ಬಿ., ಮಾಜಿ ನಿರ್ದೇಶಕ ಹೇಮಂತ ಸಾಲ್ಯಾನ್ ಉಪಸ್ಥಿತರಿದ್ದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

52 minutes ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

2 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago