Featured

ಮಂಗಳೂರು: ಸರಕಾರ ಹೊಸ ವೈರಸ್‌ ಅನ್ನು ಹೇಗೆ ನಿಯಂತ್ರಿಸಬೇಕೆಂಬುದನ್ನು ಯೋಚಿಸಬೇಕು : ಯು.ಟಿ ಖಾದರ್‌ – Vishwanews24

ಮಂಗಳೂರು: ಸರಕಾರ ಹೊಸ ವೈರಸ್‌ ಅನ್ನು ಹೇಗೆ ನಿಯಂತ್ರಿಸಬೇಕೆಂಬುದನ್ನು ಯೋಚಿಸಬೇಕು

ಗಡಿ ಬಂದ್‌ ಮಾಡುವುದು ಎನ್ನುವ ಮೂಲಕ ಜನರಿಗೆ ಗೊಂದಲ ಮೂಡಿಸುವುದಲ್ಲ..

ವಾಕ್ಸಿನೇಷನ್‌ ಶೀಘ್ರ ಮುಗಿಸಿ..

ಯು.ಟಿ ಖಾದರ್‌ ಸಲಹೆ  – Vishwanews24

ಮಂಗಳೂರು: ದೇಶದಲ್ಲಿ ಕೊರೊನಾ 3ನೇ ಅಲೆ ಆತಂಕ ಮೂಡುತ್ತಿದೆ. ಆದರೆ, ಸರಕಾರಿ ಆಸ್ಪತ್ರೆಗಳಲ್ಲಿರುವ ಆಕ್ಸಿಜನ್‌ ಪ್ಲಾಂಟ್‌, ವೆಂಟಿಲೇಟರ್‌ ನಿರ್ವಹಿಸಲು ಸಿಬ್ಬಂದಿ ಇಲ್ಲ. ಫ್ರಂಟ್‌ ಲೈನ್‌ ವರ್ಕರ್ಸ್‌ಗೆ ಬೂಸ್ಟರ್‌ ಡೋಸ್‌ ನೀಡಲು ಕ್ರಮ ಕೈಗೊಳ್ಳಿ ಎಂದು ಉಳ್ಳಾಲ ಶಾಸಕ ಯು.ಟಿ ಖಾದರ್‌ ಸಲಹೆ ನೀಡಿದ್ದಾರೆ.

ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಹೊಸ ವೈರಸ್‌ ಅನ್ನು ಹೇಗೆ ನಿಯಂತ್ರಿಸಬೇಕೆಂಬುದನ್ನು ಯೋಚಿಸಬೇಕು. ಅದರ ಬದಲು ಶಾಲಾ- ಕಾಲೇಜು ಮುಚ್ಚುವುದು,ಗಡಿ ಬಂದ್‌ ಮಾಡುವುದು ಎನ್ನುವ ಮೂಲಕ ಜನರಿಗೆ ಗೊಂದಲ ಮೂಡಿಸುವುದಲ್ಲ. ಇದೆಲ್ಲದರ ಬದಲು ವಾಕ್ಸಿನೇಷನ್‌ ಶೀಘ್ರ ಮುಗಿಸಿ. ಜಿಲ್ಲೆಯಲ್ಲಿಶೇ. 90 ಮೊದಲ ಡೋಸ್‌, 60 ಶೇ. 2ನೇ ಡೋಸ್‌ ಆಗಿದೆ. ಅದನ್ನು 100 ಶೇಕಡಾಗೊಳಿಸಿ ಎಂದರು.

ಸರಕಾರಿ ಆಸ್ಪತ್ರೆಯಲ್ಲಿರುವ ಗುತ್ತಿಗೆ ಆಧಾರಿತ ಆರೋಗ್ಯ ಸಿಬ್ಬಂದಿಯ ಗುತ್ತಿಗೆ ಅವಧಿ ಮುಗಿಯುತ್ತಾ ಬಂದಿದೆ.ಅದನ್ನು ಇನ್ನೂ ಆರು ತಿಂಗಳು ಮುಂದುವರೆಸಿ. ಫ್ರಂಟ್‌ ಲೈನ್‌ ವರ್ಕರ್ಸ್‌ಗಳಾದ ಆಶಾ ಕಾರ್ಯಕರ್ತೆಯರು, ಲ್ಯಾಬ್‌ ಟೆಕ್ನಿಷಿಯನ್‌ಗೆ ಸರ್ಕಾರದಿಂದ ಟ್ಯಾಬ್‌ ಕೊಡಿ. ಯಾಕಂದ್ರೆ ಈಗ ಸರಕಾರದ ಕಾರ್ಯಕ್ರಮಕ್ಕೆ ಸ್ವಂತ ಮೊಬೈಲ್‌ ಬಳಸುತ್ತಿದ್ದಾರೆ ಎಂದರು.

ಇನ್ನೂ ಸಹ ವಾಕ್ಸಿನೇಷನ್‌ ತೆಗೆದುಕೊಳ್ಳದವರಿಗೆ ಕಠಿಣ ನಿಯಮ ಜಾರಿಗೆ ತನ್ನಿ. ಏರ್‌ಪೋರ್ಟ್‌ನಲ್ಲಿಯೂ ಆರ್‌ಟಿಪಿಆರ್‌ ಬಗ್ಗೆ ಗೊಂದಲ ಮೂಡಿಸುತ್ತಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆ, ಜನಪ್ರತಿನಿಧಿ, ಹಿರಿಯ ಅಧಿಕಾರಿಗಳ ಸಭೆ ಕರೆಯುವಂತೆ ಆಗ್ರಹಿಸಿದ್ದಾರೆ.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

12 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

12 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

13 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

15 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

15 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

15 hours ago