Featured

ಮಂಗಳೂರು: ಸರ್ಕಾರಿ ಅಧಿಕಾರಿಗಳ ನಕಲಿ ನಂಬರ್ ಪ್ಲೇಟ್ ಹಾಕಿ ದರೋಡೆಗೆ ಸಂಚು : ಆರೋಪಿಗಳು ಪೊಲೀಸ್ ವಶಕ್ಕೆ -Vishwanews24

ಮಂಗಳೂರು: ನ್ಯಾಶನಲ್ ಕ್ರೈಮ್ ಇನ್ವೆಸ್ಟಿಗೇಶನ್ ಬ್ಯೂರೋ ಎಂದು ಬೋರ್ಡ್ ಹಾಕಿ ಕೇಂದ್ರ ಸರಕಾರದ ಲಾಂಛನ ಉಪಯೋಗಿಸಿ, ದರೋಡೆಗೆ ಸಂಚು ನಡೆಸುತ್ತಿದ್ದ 8 ಜನ ಆರೋಪಿಗಳನ್ನು ಮಂಗಳೂರು ಪೊಲೀಸರು ಪಂಪವೆಲ್ ಬಳಿ ಬಂಧಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ, “ಅಂತರಾಜ್ಯ ವಂಚನಾ ಜಾಲ ಇದಾಗಿದ್ದು , ನಿಖರ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳನ್ನು ವಶಪಡಿಸಿ ಅವರಿಂದ ಸುಮಾರು 20 ಲಕ್ಷ ಮೌಲ್ಯದ 2 ಕಾರು, 1 ಪಿಸ್ತೂಲ್‌, 1 ರಿವಾಲ್ವರ್‌ ಮತ್ತು 8 ಜೀವಂತ ಗುಂಡುಗಳನ್ನು ಹಾಗು ಅವರಲ್ಲಿದ್ದ 10 ಮೊಬೈಲ್‌ ಪೋನ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಸ್ಯಾಮ್ ಪೀಟರ್, ಮದನ್, ಸುನಿಲ್ ರಾಜ್, ಕೋದಂಡರಾಮ, ಟಿ.ಕೆ.ಬೋಪಣ್ಣ, ಚಿನ್ನಪ್ಪ, ಚೆರಿಯನ್ ಮತ್ತು ಅಬ್ದುಲ್ ಲತೀಫ್ ಎಂದು ಗುರುತಿಸಲಾಗಿದೆ.

ಈ ತಂಡದ ನಟೋರಿಯಸ್ ಲೀಡರ್ ಕೇರಳ ಮೂಲದ ಸ್ಯಾಮ್ ಪೀಟರ್ ಎಂದು ಗುರುತಿಸಲಾಗಿದ್ದು, ಕೊಲ್ಕತ್ತಾ, ಭುವನೇಶ್ವರ ಸೇರಿ ಹಲವೆಡೆ ಈತನಿಗೆ ಸಂಪರ್ಕವಿದೆ ಎಂದು ವರದಿಯಾಗಿದೆ. ಸರ್ಕಾರಿ ಅಧಿಕಾರಿಗಳ ರೀತಿಯಲ್ಲಿ ಇವರಿಗೆ 5 ಗನ್ ಮ್ಯಾನ್ ರೀತಿ ಇದ್ದರು. ಇವರಿಗೆ ನೆರವು ನೀಡಿದ ಲತೀಫ್ ಮತ್ತು ಚೆರಿಯನ್ ಎಂಬ ಮಂಗಳೂರು ನಿವಾಸಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಯುಕ್ತರು ಮಾಹಿತಿ ನೀಡಿದರು.

ನಂಬರ್ ಪ್ಲೇಟ್‌ ಇಲ್ಲದ ಪೂರ್ಣ ಕಪ್ಪು ಟೆಂಟ್‌ ಹಾಕಲಾಗಿದ್ದ ಕಾರಿನಿಂದ ಶುಕ್ರವಾರ ರಾತ್ರಿ ಆರೋಪಿಗಳನ್ನು ಬಂಧಿಸಲಾಗಿತ್ತು. . ಕಾರಿನಲ್ಲಿ ಚಾಲಕ ಸೇರಿ ಸಫಾರಿ ವಸ್ತ್ರದಲ್ಲಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಯಾಮ್‌ ಪೀಟರ್ ಎಂಬಾತ ಹೊಟೇಲ್‌ ನಲ್ಲಿದ್ದಾನೆ ಎಂಬ ಮಾಹಿತಿ ನೀಡಿದ್ದರು. ಹೊಟೇಲಿಗೆ ದಾಳಿ ನಡೆಸಿದ ಪೊಲೀಸರು ಅಲ್ಲಿ ತಂಡ ಲೀಡರ್‌ ಸ್ಯಾಮ್‌ ಪೀಟರ್, ಮತ್ತು ಆತನಿಗೆ ಸಹಾಯ ಮಾಡುತ್ತಿದ್ದ ಮಂಗಳೂರಿನ ಮೊಹಿದ್ದೀನ್‌ ಮತ್ತು ಅಬ್ದುಲ್‌ ಲತೀಫ್‌ ಎಂಬವರನ್ನು ವಶಕ್ಕೆ ಪಡೆದಿದ್ದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago