Featured

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ – vishwanews24

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ

ಮಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಕಾರ್ಯಕರ್ತರು ನಗರ ಗುರುವಾರ ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದರು.

ಸ್ಥಳೀಯ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯಕರ್ತರು ಬೆಜೈ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ಸೆಲೂನ್‌ನಲ್ಲಿದ್ದ ಪೀಠೋಪಕರಣಗಳು ಮತ್ತು ಗಾಜುಗಳನ್ನು ಒಡೆದು ಹಾಕಿ ಹಾನಿಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

12 ಕ್ಕೂ ಹೆಚ್ಚು ಜನರ ಗುಂಪು ಸಲೂನ್‌ನಲ್ಲಿ ಎಲ್ಲವನ್ನೂ ನಾಶಪಡಿಸಿದೆ. ಮಹಿಳಾ ಸಿಬ್ಬಂದಿ ಹಾಗೂ ಇತರರಿಗೆ ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಅವರು, ಸಂಬಂಧಪಟ್ಟವರನ್ನು ಕೂಡಲೇ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ಹೇಳಿದ್ದರು.

ಇನ್ನು ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದರು.

Vishwa News 24

Recent Posts

ಶಿರ್ವ ಡೇವಿಡ್‌ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ – vishwanews24

ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್‌ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ ..  ಪೊಲೀಸರಿಂದ ಆರೋಪಿಗಳ…

12 minutes ago

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…

24 minutes ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…

29 minutes ago

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ – vishwanews24

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಬಂಟ್ವಾಳ : ನಿಷೇಧಿತ ಎಂಡಿಎಂಎ,…

34 minutes ago

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

18 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

19 hours ago