Featured

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ; ಪ್ರಕರಣ ದಾಖಲು – vishwanews24

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ; ಪ್ರಕರಣ ದಾಖಲು

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ. ಆತನ ಅಣ್ಣನೂ ತನ್ನ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಯುವತಿಯೊಬ್ಬಳು ಕದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜು. 21ರಂದು ದೂರುದಾರ ಯುವತಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕದ್ರಿಯಲ್ಲಿ ಕೆಟ್ಟು ಹೋಗಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್‌ ಸವಾರ ಮೊಹಮ್ಮದ್‌ ಶಫಿನ್‌ ಕಾರನ್ನು ಸರಿಪಡಿಸಿ, ಬಳಿಕ ಆಕೆಯನ್ನು ಅದೇ ಕಾರಿನಲ್ಲಿ ಕೊಡಿಯಾಲಬೈಲಿನ ಅಪಾರ್ಟ್‌ಮೆಂಟ್‌ ಒಂದರಲ್ಲಿರುವ ಆಕೆಯ ಮನೆಗೆ ಬಿಟ್ಟು ಬಂದಿದ್ದ. ಈ ವೇಳೆ ಆತ ಆಕೆಯ ಮೊಬೈಲ್‌ ನಂಬರ್‌ ಪಡೆದಿದ್ದ.

ಆ. 8ರಂದು ಯುವತಿಯ ಮನೆಯ ಫ್ರಿಡ್ಜ್ ಕೆಟ್ಟು ಹೋಗಿದ್ದು, ಮನೆಯಲ್ಲಿ ಒಬ್ಬಳೇ ವಾಸವಿರುವುದರಿಂದ ಯುವತಿ ಸಹಾಯಕ್ಕಾಗಿ ಶಫಿನ್‌ಗೆ ಕರೆ ಮಾಡಿದ್ದಾಳೆ. ಆತ ತನ್ನ ಪರಿಚಿತ ರಿಪೇರಿಯವನನ್ನು ಯುವತಿಯ ಮನೆಗೆ ಕರೆದುಕೊಂಡು ಬಂದು ರಿಪೇರಿ ಮಾಡಿಸಿದ್ದ. ಬಳಿಕ ಎಲೆಕ್ಟ್ರಿಶಿಯನ್‌ನನ್ನು ಬಿಟ್ಟು ಬರುತ್ತೇನೆ ಎಂದು ಹೇಳಿ ಅಲ್ಲಿಯವರೆಗೆ ಫ್ರಿಡ್ಜ್ ಆನ್‌ ಮಾಡಬೇಡಿ ಎಂದು ಸೂಚಿಸಿದ್ದ. ಕೆಲವು ಹೊತ್ತಿನ ಬಳಿಕ ಶಫಿನ್‌ ವಾಪಸು ಬಂದಿದ್ದು, ಈ ವೇಳೆ ಹಣ್ಣು ಹಾಗೂ ಜ್ಯೂಸ್‌ ತಂದಿದ್ದ. ಜ್ಯೂಸ್‌ ಕುಡಿದ ಯುವತಿ ನಿದ್ದೆಗೆ ಜಾರಿದ್ದು, ಎಚ್ಚರಗೊಂಡಾಗ ಅನುಮಾನಗೊಂಡು ವಿಚಾರಿಸಿದಾಗ ಆತ ದೈಹಿಕ ಸಂಪರ್ಕ ನಡೆಸಿರುವುದಾಗಿ ತಿಳಿಸಿದ್ದ. ಜತೆಗೆ ಮುಂದೆಯೂ ಸಹಕರಿಸಬೇಕು. ಇಲ್ಲದಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಮಾಡಿರುವ ವೀಡಿಯೋವನ್ನು ಹಾಕುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ವೆುಲ್‌ ಮಾಡಿದ್ದಾನೆ. ಜತೆಗೆ ಯುವತಿಯ ಕಾರನ್ನು ತನ್ನಲ್ಲಿ ಇಟ್ಟುಕೊಂಡಿದ್ದ.

ಮನೆಗೆ ಅಕ್ರಮ ಪ್ರವೇಶ, ನಗದು ಕಳವು
ಈ ನಡುವೆ ಯುವತಿಯ ಮನೆಯವರು ಕಾರನ್ನು ಕೇಳಿದ್ದಾರೆ. ಆತನಿಂದ ಕಾರನ್ನು ಪಡೆದುಕೊಳ್ಳಬೇಕು ಎಂದು ಅ. 25ರಂದು ಆತನ ವಿಳಾಸವನ್ನು ಹುಡುಕಿಕೊಂಡು ದೇರಳಕಟ್ಟೆಯ ಆತ ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ಹೋದಾಗ ಕಾರು ಪಾರ್ಕಿಂಗ್‌ ಸ್ಥಳದಲ್ಲಿ ಕಂಡುಬಂದಿದೆ. ವಾಚ್‌ಮನ್‌ ಬಳಿ ಮನೆಯ ವಿಳಾಸ ಪಡೆದು ಹೋಗಿ ಆತನ ತಾಯಿಯಲ್ಲಿ ಕಾರು ವಾಪಸು ನೀಡುವಂತೆ ವಿನಂತಿಸಿದಾಗ ಅಲ್ಲಿದ್ದ ಶಫಿನ್‌ನ ಅಣ್ಣ ಮೊಹಮ್ಮದ್‌ ಶಿಯಾಬ್‌, ಅತ್ಯಾಚಾರ ಮಾಡಲು ಯತ್ನಿಸಿದ್ದ. ಜತೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ. ಆತನಿಂದ ತಪ್ಪಿಸಿಕೊಂಡು ಯುವತಿ ಮನೆಗೆ ಬಂದಿದ್ದಾಳೆ. ಅ. 27ರಂದು ರಾತ್ರಿ 9 ಗಂಟೆ ವೇಳೆ ಮೊಹಮ್ಮದ್‌ ಶಫೀನ್‌ ಅಕ್ರಮವಾಗಿ ಯುವತಿಯ ಮನೆಗೆ ಪ್ರವೇಶಿಸಿ, ಆಕೆಯ ಬ್ಯಾಗ್‌ನಲ್ಲಿದ್ದ 62 ಸಾವಿರ ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

 

ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ಆಗ್ರಹಿಸಿದ್ದಾಳೆ. ಪ್ರಕರಣ ದಾಖಲಿಸಿದ ಬಳಿಕ ಆರೋಪಿ ಶಿಯಾಬ್‌ ಪತ್ನಿಯೂ ಕರೆ ಮಾಡಿ ಬೆದರಿಕೆ ಹಾಕಿದ್ದು, ಆಕೆಯ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಯುವತಿ ಇನ್ನೊಂದು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

12 minutes ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

4 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

5 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

5 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

6 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

6 hours ago