Featured

ಮಂಗಳೂರು: ಸಾಕು ಪ್ರಾಣಿ ಹಾಗೂ ಪಕ್ಷಿಗಳ  ಪೋಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು: ಜಿಲ್ಲಾಧಿಕಾರಿ ಡಾ. ರಾಜೇಂದ್ರ -Vishwanews24

ಮಂಗಳೂರು: ಸಾಕು ಪ್ರಾಣಿ ಹಾಗೂ ಪಕ್ಷಿಗಳ  ಪೋಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು: ಜಿಲ್ಲಾಧಿಕಾರಿ ಡಾ. ರಾಜೇಂದ್ರ -Vishwanews2

ಮಂಗಳೂರು : ಕೋವಿಡ್-19 ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ – ರಕ್ಷಣೆ ನಿಲ್ಲಬಾರದು, ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು.

ಅವರು ಜು.14ರ ಬುಧವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿರುವುದು ಕಂಡುಬರುತ್ತಿದ್ದು, ಅಂತಹ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆಗೆ ಪ್ರಾಣಿ ದಯಾ ಸಂಘವು ಕಾರ್ಯನಿರ್ವಹಿಸುವುದರೊಂದಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ಪ್ರಾಣಿ ಹಿಂಸೆಗಳ ದುಷ್ಟರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಪ್ರಾಣಿಗಳನ್ನು ಮಾರಾಟ ಮಾಡುವುದು ಅಥವಾ ಕೊಲ್ಲುವುದು ಕಂಡುಬಂದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಪ್ರಕರಣ ದಾಖಲಿಸಬೇಕು, ಗೋಶಾಲೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು, ಜಿಲ್ಲೆಯಲ್ಲಿ ಪ್ರತೀ ಗ್ರಾಮದಲ್ಲಿ ಗೋಮಾಳ ನಿರ್ಮಿಸಿ ಅದರ ನಿರ್ವಹಣೆಯನ್ನು ಸ್ಥಳೀಯ ದೇವಸ್ಥಾನಗಳಿಗೆ ನೀಡಬೇಕು, ಅದಕ್ಕೆ ಸಂಬಂಧಿಸಿದ ಖರ್ಚು-ವೆಚ್ಚವನ್ನು ಜಿಲ್ಲಾಡಳಿತದ ವತಿಯಿಂದ ಭರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಸ ವಿಂಗಡಣೆ ಸರಿಯಾದ ಕ್ರಮದಲ್ಲಿ ಆಗದಿರುವ ಕಾರಣ ಗಾಜು, ಪ್ಲಾಸ್ಟಿಕ್, ಮೂಳೆ ಇನ್ನಿತರ ಅಪಾಯಕಾರಿ ವಸ್ತುಗಳನ್ನು ಪ್ರಾಣಿಗಳು ಸೇವಿಸಿ ಸಾವಿಗೀಡಾಗುತ್ತೀವೆ, ಹಾಗಾಗಿ ತ್ಯಾಜ್ಯ ವಿಂಗಡಣೆಗೆ ಸರಿಯಾದ ಕ್ರಮ ಆಗಬೇಕು, ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲೂ ಸೂಕ್ತವಾಗಿ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಆಗಬೇಕು ಎಂದು ತಿಳಿಸಿದರು.

ನಗರದ ಫುಟ್‍ಪಾತ್‍ಗಳಲ್ಲಿರುವ ಪೆಟ್ ಶಾಪ್‍ಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ಅವುಗಳು ನೋಂದಣಿಯಾಗಿರುವ ಬಗ್ಗೆ ಮಾಹಿತಿ ಪಡೆಯಬೇಕು, ನೋಂದಣಿ ಆಗದ ಪೆಟ್ ಶಾಪ್‍ಗಳ ವಿರುದ್ಧ ಕಾನುನು ಬದ್ದ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ನಗರದ ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು, ಪ್ರಾಣಿದಯಾ ಸಂಘದ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago