ಮಂಗಳೂರು: 1 ಲಕ್ಷದಷ್ಟು ಸಂಖ್ಯೆಯ ಫಾಲೋವರ್ಸ್ ಹೊಂದಿದ್ದ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ ಇನ್ ಸ್ಟಾ ಗ್ರಾಂ ಪೇಜ್ ರದ್ದು (De Activate) ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ರೇಕಕಾರಿ ಮತ್ತು ಪ್ರಚೋದನ ಕಾರಿಯಾಗಿ ಜನರಲ್ಲಿ ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ವೆಸಗುವಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿ, ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ದ್ವೇಷಭಾವನೆ ಹುಟ್ಟುವಂತೆ beary_royal_nawab ಎಂಬ ಇನ್ ಸ್ಟಾ ಗ್ರಾಂ ಫೇಜ್ ನಲ್ಲಿ ಪೋಸ್ಟ್ ಗಳನ್ನು ಮಾಡಲಾಗುತ್ತಿತ್ತು , ಸದ್ರಿ ಇನ್ ಸ್ಟಾ ಗ್ರಾಂ ಫೇಜ್ ಗೆ 01 ಲಕ್ಷದಷ್ಟು ಸಂಖ್ಯೆಯ ಪಾಲೋವರ್ಸ್ ಹೊಂದಿದ್ದರು.
ಮಂಗಳೂರು ನಗರದ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಒಟ್ಟು 03 ಪ್ರಕರಣಗಳು ದಾಖಲಾಗಿದ್ದು, ಸದ್ರಿ ಪ್ರಕರಣಗಳಲ್ಲಿ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿರುತ್ತದೆ.
ಸದ್ರಿ ಪೇಜ್ ನ ಬಗ್ಗೆ ಮಾಹಿತಿ ನೀಡುವಂತೆ, ಸಂಬಂಧಪಟ್ಟ Law Enforcement Agency ರವರಿಗೆ ಪತ್ರ ವ್ಯವಹಾರ ನಡೆಸಲಾಗಿತ್ತು, ಅದರಂತೆ ಸಂಬಂಧಪಟ್ಟ Law Enforcement Agency ರವರು beary_royal_nawab ಎಂಬ ಇನ್ ಸ್ಟಾ ಗ್ರಾಂ ಫೇಜ್ ನ್ನು ಭಾರತ ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಿರುತ್ತಾರೆ.
ಸದ್ರಿ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರವಾಲ್ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರರಾದ ಶ್ರೀ ಸಿದ್ದಾರ್ಥ ಗೋಯಲ್ ಐ.ಪಿ.ಎಸ್. (ಕಾ ಮತ್ತು ಸು) ಮತ್ತು ಶ್ರೀ ರವಿಶಂಕರ್ (ಅ ಮತ್ತು ಸಂ) ರವರ ಮಾರ್ಗದರ್ಶನದಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆಸಲಾಗಿದೆ.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…