Featured

ಮಂಗಳೂರು : ಸಾವರ್ಕರ್‌ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ? ಹಿಂದೂ ಮಹಾಸಭಾ  – Vishwanews24

ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ ..

ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ..

ಬಿಜೆಪಿ ವಿರುದ್ಧ ಹಿಂದೂ ಮಹಾಸಭಾ ಆಕ್ರೋಶ

ಮಂಗಳೂರು: ‘ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ’ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾರ್ಥ ರಾಜಕೀಯ ಮಾಡುವ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಂಡು ನಂತರ ಸಾವರ್ಕರ್ ಬಗ್ಗೆ ಧ್ವನಿ ಎತ್ತಲಿ. ಸಾವರ್ಕರ್ ಕಟ್ಟಿದ ಅಖಿಲ ಭಾರತ ಹಿಂದೂ ಮಹಾಸಭಾ ಆಗಲಿ, ಅವರ ಅಖಂಡ ಭಾರತದ ಪರಿಕಲ್ಪನೆಯಾಗಲಿ, ಹಿಂದುತ್ವ ವಿಚಾರಧಾರೆಯಾಗಲಿ ಬಿಜೆಪಿಗೆ ಬೇಕಾಗಿಲ್ಲ. ಮುಂಬರುವ ಚುನಾವಣೆಗೆ ಸಾವರ್ಕರ್ ಹೆಸರು ಮತ್ತು ಭಾವಚಿತ್ರ ಮಾತ್ರ ಬೇಕಾಗಿದೆ. ಇದು ಬಿಜೆಪಿಯ ದಿವಾಳಿತನವನ್ನು ತೋರಿಸುತ್ತದೆ’ ಎಂದರು.

ಸಾವರ್ಕರ್‌ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ಎಂದು ಸವಾಲೆಸೆದರು.
ಸಾವರ್ಕರ್ ವಿರೋಧಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಪುಕ್ಕಲು ಸ್ವಭಾವದವರು. ಗಾಂಧೀಜಿ ಹೇಗೆ ಭಾರತ ವಿಭಜನೆಗೆ ಕಾರಣರಾದರೋ ಹಾಗೆಯೇ ಸಿದ್ದರಾಮಯ್ಯ ಮುಸ್ಲಿಂ ‘ಏರಿಯಾ– ಹಿಂದೂ ಏರಿಯಾ’ ಎಂದು ವಿಭಜಿಸುವ ಮೂಲಕ ದೇಶವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ವಿರುದ್ಧ ದಾಖಲೆಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಲು ಯೋಚಿಸಲಾಗಿದೆ ಎಂದು ಹೇಳಿದರು.

ಕಾಶ್ಮೀರ: ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ರಕ್ತದಾನ ಮಾಡಿ ಜೀವ ಉಳಿಸಿದ ಭಾರತೀಯ ಸೈನಿಕರು – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

3 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

4 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

4 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

4 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago