Featured

ಮಂಗಳೂರು : ಸಾವರ್ಕರ್‌ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ? ಹಿಂದೂ ಮಹಾಸಭಾ  – Vishwanews24

ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ ..

ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ..

ಬಿಜೆಪಿ ವಿರುದ್ಧ ಹಿಂದೂ ಮಹಾಸಭಾ ಆಕ್ರೋಶ

ಮಂಗಳೂರು: ‘ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ’ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾರ್ಥ ರಾಜಕೀಯ ಮಾಡುವ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಂಡು ನಂತರ ಸಾವರ್ಕರ್ ಬಗ್ಗೆ ಧ್ವನಿ ಎತ್ತಲಿ. ಸಾವರ್ಕರ್ ಕಟ್ಟಿದ ಅಖಿಲ ಭಾರತ ಹಿಂದೂ ಮಹಾಸಭಾ ಆಗಲಿ, ಅವರ ಅಖಂಡ ಭಾರತದ ಪರಿಕಲ್ಪನೆಯಾಗಲಿ, ಹಿಂದುತ್ವ ವಿಚಾರಧಾರೆಯಾಗಲಿ ಬಿಜೆಪಿಗೆ ಬೇಕಾಗಿಲ್ಲ. ಮುಂಬರುವ ಚುನಾವಣೆಗೆ ಸಾವರ್ಕರ್ ಹೆಸರು ಮತ್ತು ಭಾವಚಿತ್ರ ಮಾತ್ರ ಬೇಕಾಗಿದೆ. ಇದು ಬಿಜೆಪಿಯ ದಿವಾಳಿತನವನ್ನು ತೋರಿಸುತ್ತದೆ’ ಎಂದರು.

ಸಾವರ್ಕರ್‌ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ಎಂದು ಸವಾಲೆಸೆದರು.
ಸಾವರ್ಕರ್ ವಿರೋಧಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಪುಕ್ಕಲು ಸ್ವಭಾವದವರು. ಗಾಂಧೀಜಿ ಹೇಗೆ ಭಾರತ ವಿಭಜನೆಗೆ ಕಾರಣರಾದರೋ ಹಾಗೆಯೇ ಸಿದ್ದರಾಮಯ್ಯ ಮುಸ್ಲಿಂ ‘ಏರಿಯಾ– ಹಿಂದೂ ಏರಿಯಾ’ ಎಂದು ವಿಭಜಿಸುವ ಮೂಲಕ ದೇಶವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ವಿರುದ್ಧ ದಾಖಲೆಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಲು ಯೋಚಿಸಲಾಗಿದೆ ಎಂದು ಹೇಳಿದರು.

ಕಾಶ್ಮೀರ: ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ರಕ್ತದಾನ ಮಾಡಿ ಜೀವ ಉಳಿಸಿದ ಭಾರತೀಯ ಸೈನಿಕರು – Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

22 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

24 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

24 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago