Featured

ಮಂಗಳೂರು : ಸಾವರ್ಕರ್‌ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ? ಹಿಂದೂ ಮಹಾಸಭಾ  – Vishwanews24

ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ ..

ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ..

ಬಿಜೆಪಿ ವಿರುದ್ಧ ಹಿಂದೂ ಮಹಾಸಭಾ ಆಕ್ರೋಶ

ಮಂಗಳೂರು: ‘ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ’ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾರ್ಥ ರಾಜಕೀಯ ಮಾಡುವ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಂಡು ನಂತರ ಸಾವರ್ಕರ್ ಬಗ್ಗೆ ಧ್ವನಿ ಎತ್ತಲಿ. ಸಾವರ್ಕರ್ ಕಟ್ಟಿದ ಅಖಿಲ ಭಾರತ ಹಿಂದೂ ಮಹಾಸಭಾ ಆಗಲಿ, ಅವರ ಅಖಂಡ ಭಾರತದ ಪರಿಕಲ್ಪನೆಯಾಗಲಿ, ಹಿಂದುತ್ವ ವಿಚಾರಧಾರೆಯಾಗಲಿ ಬಿಜೆಪಿಗೆ ಬೇಕಾಗಿಲ್ಲ. ಮುಂಬರುವ ಚುನಾವಣೆಗೆ ಸಾವರ್ಕರ್ ಹೆಸರು ಮತ್ತು ಭಾವಚಿತ್ರ ಮಾತ್ರ ಬೇಕಾಗಿದೆ. ಇದು ಬಿಜೆಪಿಯ ದಿವಾಳಿತನವನ್ನು ತೋರಿಸುತ್ತದೆ’ ಎಂದರು.

ಸಾವರ್ಕರ್‌ ಅವರನ್ನು ಬಿಜೆಪಿ ಒಪ್ಪುವುದಾದರೆ ಅವರ ಜನ್ಮ ದಿನವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸುವ ತಾಕತ್ತು ಇದೆಯೇ ಎಂದು ಸವಾಲೆಸೆದರು.
ಸಾವರ್ಕರ್ ವಿರೋಧಿ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಪುಕ್ಕಲು ಸ್ವಭಾವದವರು. ಗಾಂಧೀಜಿ ಹೇಗೆ ಭಾರತ ವಿಭಜನೆಗೆ ಕಾರಣರಾದರೋ ಹಾಗೆಯೇ ಸಿದ್ದರಾಮಯ್ಯ ಮುಸ್ಲಿಂ ‘ಏರಿಯಾ– ಹಿಂದೂ ಏರಿಯಾ’ ಎಂದು ವಿಭಜಿಸುವ ಮೂಲಕ ದೇಶವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ವಿರುದ್ಧ ದಾಖಲೆಗಳನ್ನು ಸಂಗ್ರಹಿಸಿ ಪ್ರಕರಣ ದಾಖಲಿಸಲು ಯೋಚಿಸಲಾಗಿದೆ ಎಂದು ಹೇಳಿದರು.

ಕಾಶ್ಮೀರ: ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ರಕ್ತದಾನ ಮಾಡಿ ಜೀವ ಉಳಿಸಿದ ಭಾರತೀಯ ಸೈನಿಕರು – Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago