Featured

ಮಂಗಳೂರು : ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ ತೋರ್ಸಿ :  ಖಾದರ್ ಸವಾಲ್ – Vishwanews24

ಮಂಗಳೂರು : ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ

ಒಂದು ಇತಿಹಾಸ ಇದ್ರೆ ತೋರ್ಸಿ :  ಖಾದರ್ ಸವಾಲ್

ಮಂಗಳೂರು: ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ , ಇತಿಹಾಸ ಪುಸ್ತಕದಲ್ಲಿ ಅದು ಕಾಣ ಸಿಕ್ಕರೆ ಅಥವಾ ಸಾಕ್ಷಿ ಇದ್ರೆ ನನಗೆ ತೋರಿಸುತ್ತೀರಾ ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರು ಸವಾಲೆಸೆದರು.

ಸಾವರ್ಕರ್ ಬ್ಯಾನರ್ ವಿವಾದದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ‘ಸಾವರ್ಕರ್ ವಿರುದ್ಧ ಕಾಂಗ್ರೆಸ್‌ಗೆ ಇರುವುದು ಒಂದು ತೆರನಾದ ಸೈದ್ಧಾಂತಿಕ ಭಿನ್ನಾಭಿಪ್ರಾಯ. ನನ್ನ ಪ್ರಶ್ನೆ ಏನು ಕೇಳಿದ್ರೆ ಅಂಡಮಾನ್ ಜೈಲಿಗೆ ಹೋಗಿ ಪಡಬಾರದ ಕಷ್ಟ ಪಟ್ಟು ಹುತಾತ್ಮರಾದವರು ದೇಶಪ್ರೇಮಿಗಳಾ? ಅಥವಾ ಬ್ರಿಟಿಷರಿಗೆ ದಯಾಪಾಲನಾ ಅರ್ಜಿ ಬರೆದು ನಾನು ನಿಮ್ಮ ಜೊತೆ ಇನ್ನು ಹೋರಾಟ ಮಾಡುವುದಿಲ್ಲ ಅಂತ ಹೇಳಿ ಹೋರಾಟ ನಿಲ್ಲಿಸಿದವರು ದೇಶಪ್ರೇಮಿಗಳಾ? ಎಂದು ಖಾರವಾಗಿ ಪ್ರಶ್ನಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಸಾವರ್ಕರ್ ಬ್ಯಾನರ್ ವಿವಾದಕ್ಕೆ ಸಂಬಂಧಿಸಿ ಮಾತನಾಡಿ ‘ ಯಾರಿಗೂ ಯಾರೂ ಹಾಕಿದ ಬ್ಯಾನರ್ ತೆಗೆಯುವ ಹಕ್ಕಿಲ್ಲ. ಆದರೆ ಹಾಕುವವರು ಪರ್ಮಿಷನ್ ತೆಗೆದುಕೊಂಡು ಹಾಕಬೇಕು. ಒಬ್ಬರು ಹಾಕಿದ ಬ್ಯಾನರ್ನ್ನು ಇನ್ನೊಬ್ಬರಿಗೆ ಹೇಳಿ ಒತ್ತಾಯಪೂರ್ವಕವಾಗಿ ಹಾಕುವ ಕ್ರಮ ಸರಿಯಲ್ಲ. ಆದರೆ ಬ್ಯಾನರ್ ಹಾಕುವವರು ಕೂಡಾ ಸದುದ್ದೇಶ ಹೊಂದಿರಬೇಕು.

ಮಂಗಳೂರು: ಅನಧಿಕೃತ ಮತ್ತು ವಿವಾದಾತ್ಮಕ ಫ್ಲೆಕ್ಸ್ ಹಾಕಿದ್ರೆ ನಿರ್ದಾಕ್ಷಿಣ್ಯ ಕ್ರಮ : ಜಿಲ್ಲಾಧಿಕಾರಿ ಸೂಚನೆ – Vishwanews24

ನಮ್ಮ ಕ್ಷೇತ್ರದಲ್ಲಿ ಹಾಗೆ ಯಾರೂ ಕೂಡಾ ತೆಗೆಯುವ ಅವಕಾಶ ಇರಲಿಲ್ಲ. ಬ್ಯಾನರ್ ತೆಗೆಯಲು ಜನಸಾಮಾನ್ಯನು , ಸಂಘ- ಸಂಸ್ಥೆಗಳು ಅದನ್ನು ತೆಗಿಲಿಕ್ಕೆ ಹೇಳಿಲ್ಲ. ಪರ್ಮಿಷನ್ ತೆಗೆದುಕೊಳ್ಳದೆ ಹಾಕಿರುವುದು ತಪ್ಪು ಅದಕ್ಕೆ ತೆಗೆಸಿದ್ದಾರೆ. ಆದರೆ ನಮ್ಮಲ್ಲಿ ಯಾರೂ ಕೂಡಾ ಅದರ ವಿರುದ್ಧ ಅಪಸ್ವರ ಎತ್ತಿಲ್ಲ.

ಮೊನ್ನೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ‘ಸ್ವಾತಂತ್ರ್ಯಕ್ಕೆ ಕಷ್ಟ ಪಟ್ಟ, ದೇಶಕ್ಕಾಗಿ ತನ್ನ ಇಡೀ ಆಸ್ತಿ ಬರೆದುಕೊಟ್ಟ ನೆಹರೂರವರ ಫೋಟೋ ಹಾಕದೆ ಬಿಟ್ಟಿದ್ದಾರಲ್ವಾ? ಏನು ಉದ್ದೇಶ. ನಮಗೆ ಒಳ್ಳೇದೇ ಆಯಿತು ಬಿಡಿ. ಯಾರ್ಯಾರ ಫೋಟೋ ಜೊತೆ ನಮ್ಮ ನೆಹರೂರವರ ಫೋಟೋ ಇಡದೇ ಇರುವುದು. ಇಲ್ಲದಿದ್ದರೆ ಇವರ ಘನತೆ ಕಡಿಮೆ ಆಗುತ್ತಿತ್ತು’ ಎಂದು ವ್ಯಂಗ್ಯವಾಡಿದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

9 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago