ಮಂಗಳೂರು: ಬದುಕುಳಿಯುವ ಕೊನೆಯ ಯತ್ನವಾಗಿ ಸಿಎಂ ಸಿದ್ದರಾಮಯ್ಯ 14 ಸೈಟ್ ವಾಪಾಸ್ ಕೊಟ್ಟಿರುವುದು ಅವರಿಗೆ ಬುದ್ಧಿ ಬಂದ ಹಾಗೆ ಕಾಣುತ್ತದೆ. ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜಿನಾಮೆ ಕೊಡಲಿ ಎಂದು ಸಂಸದ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.
ರಾಜಿನಾಮೆ ಕೊಟ್ಟು ಸಂವಿಧಾನದ ಆಶಯಗಳಿಗೆ ಗೌರವ ಕೊಡಲಿ. ಕೇವಲ ಕುರ್ಚಿಗೆ ಅಂಟಿಕೊಳ್ಳುವುದೊಂದೇ ಸಿಎಂ ಆಶಯವಿದ್ದಂತೆ ಕಾಣುತ್ತಿದೆ ಎಂದು ಹೇಳಿದರು.
ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಒಂದಿಂಚು ಅಭಿವೃದ್ಧಿ ಇಲ್ಲದೆ ಜನ ಕಂಗೆಟ್ಟಿದ್ದಾರೆ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಿದ್ದಾರೆ. ದಲಿತರ ಜಾಗವನ್ನು ಕಬಳಿಸಿ, ಪತ್ನಿ ಹೆಸರಿಗೆ ಸೈಟ್ ಮಾಡಿಕೊಂಡಿದ್ದಾರೆ ಎಂದರು.
ಬಿಜೆಪಿ ತನ್ನ ಹೋರಾಟದಲ್ಲಿ ಯಶಸ್ವಿಯಾಗಿದೆ. ವಿಧಾನಮಂಡಲದ ಒಳಗೆ, ಹೊರಗೆ, ಸಂಸತ್ತಿನಲ್ಲಿ ಸಿಎಂ ಅಕ್ರಮದ ವಿರುದ್ಧ ಹೋರಾಡಿದ್ದೇವೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ, ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ ಎಂದು ಚೌಟ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…