Featured

ಮಂಗಳೂರು : ಸಿಎಂ ಭೇಟಿಯಾದ ಐಕಳ ಹರೀಶ್ ಶೆಟ್ಟಿ ; ಬೇಡಿಕೆ ಈಡೇರಿಸುವುದಾಗಿ ಭರವಸೆ – Vishwanews24

ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ : ಐಕಳ ಹರೀಶ್ ಶೆಟ್ಟಿ

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದ ಅನುದಾನವನ್ನೂ ಬಿಡುಗಡೆಗೊಳಿಸಿದರು.

ಬಂಟ ಸಮುದಾಯವನ್ನು 2A ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿ, ಬಂಟರ ಯಾನೆ ನಾಡವರ ಎಲ್ಲಾ ಆಶೋತ್ತರಗಳನ್ನು ಈಡೇರಿಸುವುದಾಗಿ ಒಕ್ಕೂಟದ ಅಧ್ಯಕ್ಷರಿಗೆ ಭರವಸೆಯನ್ನು ನೀಡುವ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ ಎಂದು ಐಕಳ ಹರೀಶ್ ಶೆಟ್ಟಿ ಪತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಿನಾಂಕ 07.03.2023 ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ 11 ಗಂಟೆಗೆ ಐಕಳ ಹರೀಶ್ ಶೆಟ್ಟಿ ಯವರ ಜೊತೆ ನಡೆಸಿದ ವಿಸ್ತೃತವಾದ ಮಾತುಕತೆಯ ನಡೆಸಿ ಐಕಳ ಅವರು ಬಂಟ ಸಮಾಜದ ಎಲ್ಲಾ ವಿಚಾರಗಳನ್ನು ಮನದಟ್ಟು ಮಾಡುವ ಮೂಲಕ ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಯ ಅವಶ್ಯಕತೆ ಮನಗಂಡು ಅವರು ಬಂಟ ನಾಡವರ ನಿಗಮ ಸ್ಥಾಪನೆಗೆ ತನ್ನ ಒಪ್ಪಿಗೆ ನೀಡಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಬಲವನ್ನು ತುಂಬಿದ್ದಾರೆ.

ಈ ಮೂಲಕ ಇಡೀ ಬಂಟ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ ಮಾನ್ಯ ಮುಖ್ಯಮಂತ್ರಿಗಳ ಸಹಕಾರದಿಂದ ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ.

ಈ ಐತಿಹಾಸಿಕ ಕ್ಷಣಕ್ಕೆ ಕಾರಣಕರ್ತರಾದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ, ಜಗತ್ತಿನ ಎಲ್ಲಾ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು, ಎಲ್ಲಾ ಬಂಟರ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago