ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು.
ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದ ಅನುದಾನವನ್ನೂ ಬಿಡುಗಡೆಗೊಳಿಸಿದರು.
ಬಂಟ ಸಮುದಾಯವನ್ನು 2A ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿ, ಬಂಟರ ಯಾನೆ ನಾಡವರ ಎಲ್ಲಾ ಆಶೋತ್ತರಗಳನ್ನು ಈಡೇರಿಸುವುದಾಗಿ ಒಕ್ಕೂಟದ ಅಧ್ಯಕ್ಷರಿಗೆ ಭರವಸೆಯನ್ನು ನೀಡುವ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ ಎಂದು ಐಕಳ ಹರೀಶ್ ಶೆಟ್ಟಿ ಪತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಿನಾಂಕ 07.03.2023 ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ 11 ಗಂಟೆಗೆ ಐಕಳ ಹರೀಶ್ ಶೆಟ್ಟಿ ಯವರ ಜೊತೆ ನಡೆಸಿದ ವಿಸ್ತೃತವಾದ ಮಾತುಕತೆಯ ನಡೆಸಿ ಐಕಳ ಅವರು ಬಂಟ ಸಮಾಜದ ಎಲ್ಲಾ ವಿಚಾರಗಳನ್ನು ಮನದಟ್ಟು ಮಾಡುವ ಮೂಲಕ ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಯ ಅವಶ್ಯಕತೆ ಮನಗಂಡು ಅವರು ಬಂಟ ನಾಡವರ ನಿಗಮ ಸ್ಥಾಪನೆಗೆ ತನ್ನ ಒಪ್ಪಿಗೆ ನೀಡಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಬಲವನ್ನು ತುಂಬಿದ್ದಾರೆ.
ಈ ಮೂಲಕ ಇಡೀ ಬಂಟ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ ಮಾನ್ಯ ಮುಖ್ಯಮಂತ್ರಿಗಳ ಸಹಕಾರದಿಂದ ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ.
ಈ ಐತಿಹಾಸಿಕ ಕ್ಷಣಕ್ಕೆ ಕಾರಣಕರ್ತರಾದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ, ಜಗತ್ತಿನ ಎಲ್ಲಾ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು, ಎಲ್ಲಾ ಬಂಟರ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…