ಮಂಗಳೂರು : ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬುದಕ್ಕೆ ಬೆಂಬಲ ನೀಡಿ ಸಿಟಿ ಬಸ್ನಲ್ಲಿ ತುಳು ಲಿಪಿ ಹಾಕಲಾಗಿದೆ. ಬಸ್ನಲ್ಲಿಯೂ ತುಳು ಲಿಪಿ ಪ್ರೀತಿ ವ್ಯಕ್ತವಾಗಿದ್ದು ಈ ಬಸ್ ಈಗ ಎಲ್ಲರ ಗಮನ ಸೆಳೆದಿದೆ.
ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಿಂದ ಅತ್ತಾವರ ಮಾರ್ಗವಾಗಿ ಮಂಗಳಾದೇವಿಗೆ ತೆರಳುವ ಗಣೇಶ್ ಪ್ರಸಾದ್ (ರೂಟ್ ನಂ:27) ಎಂಬ ಹೆಸರಿರುವ ಈ ಬಸ್ನ ಮಾಲಿಕರು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಅವರು.
ಈ ಬಸ್ಗೆ ಇತ್ತೀಚೆಗೆ ಪೈಂಟಿಂಗ್ ಮಾಡಲಾಗಿದ್ದು ಆ ಸಮಯದಲ್ಲಿ ಬಸ್ನ ಎರಡೂ ಬದಿಗಳಲ್ಲಿ ಬಸ್ನ ಹೆಸರು ಅಥವಾ ರೂಟ್ ಬರೆಯುವ ಬದಲಿಗೆ ತುಳು ಲಿಪಿ ಅ ದಿಂದ ಅಃ ವರೆಗೆ ಬರೆದಿದ್ದು, ಪಕ್ಕದಲ್ಲಿಯೇ ಹ್ಯಾಶ್ ಟ್ಯಾಗ್ ಮುಖೇನ #TuluTo8thSchedule #TuluofficiallnKA_KL ಎಂದು ಬರೆಯಲಾಗಿದೆ.
ದಿಲ್ ರಾಜ್ ಆಳ್ವ ಅವರ ಮಾಲಕತ್ವದಲ್ಲಿ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಿಂದ ಅತ್ತಾವರ ಮುಖೇನ ಮಂಗಳಾದೇವಿಗೆ ತೆರಳುವ ಐದು ಬಸ್ಗಳಿದ್ದು ಈ ಮೊದಲೇ ಆ ಬಸ್ಗಳಿಗೆ ವಿಶೇಷ ರೀತಿಯಲ್ಲಿ ಪೈಟಿಂಗ್ ಮಾಡಿದ್ದಾರೆ.
ಈ ಬಸ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಿದ್ದು ಮಂಗಳೂರಿನ ಜನತೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…