ಮಂಗಳೂರು : ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬುದಕ್ಕೆ ಬೆಂಬಲ ನೀಡಿ ಸಿಟಿ ಬಸ್ನಲ್ಲಿ ತುಳು ಲಿಪಿ ಹಾಕಲಾಗಿದೆ. ಬಸ್ನಲ್ಲಿಯೂ ತುಳು ಲಿಪಿ ಪ್ರೀತಿ ವ್ಯಕ್ತವಾಗಿದ್ದು ಈ ಬಸ್ ಈಗ ಎಲ್ಲರ ಗಮನ ಸೆಳೆದಿದೆ.
ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಿಂದ ಅತ್ತಾವರ ಮಾರ್ಗವಾಗಿ ಮಂಗಳಾದೇವಿಗೆ ತೆರಳುವ ಗಣೇಶ್ ಪ್ರಸಾದ್ (ರೂಟ್ ನಂ:27) ಎಂಬ ಹೆಸರಿರುವ ಈ ಬಸ್ನ ಮಾಲಿಕರು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಅವರು.
ಈ ಬಸ್ಗೆ ಇತ್ತೀಚೆಗೆ ಪೈಂಟಿಂಗ್ ಮಾಡಲಾಗಿದ್ದು ಆ ಸಮಯದಲ್ಲಿ ಬಸ್ನ ಎರಡೂ ಬದಿಗಳಲ್ಲಿ ಬಸ್ನ ಹೆಸರು ಅಥವಾ ರೂಟ್ ಬರೆಯುವ ಬದಲಿಗೆ ತುಳು ಲಿಪಿ ಅ ದಿಂದ ಅಃ ವರೆಗೆ ಬರೆದಿದ್ದು, ಪಕ್ಕದಲ್ಲಿಯೇ ಹ್ಯಾಶ್ ಟ್ಯಾಗ್ ಮುಖೇನ #TuluTo8thSchedule #TuluofficiallnKA_KL ಎಂದು ಬರೆಯಲಾಗಿದೆ.
ದಿಲ್ ರಾಜ್ ಆಳ್ವ ಅವರ ಮಾಲಕತ್ವದಲ್ಲಿ ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದಿಂದ ಅತ್ತಾವರ ಮುಖೇನ ಮಂಗಳಾದೇವಿಗೆ ತೆರಳುವ ಐದು ಬಸ್ಗಳಿದ್ದು ಈ ಮೊದಲೇ ಆ ಬಸ್ಗಳಿಗೆ ವಿಶೇಷ ರೀತಿಯಲ್ಲಿ ಪೈಟಿಂಗ್ ಮಾಡಿದ್ದಾರೆ.
ಈ ಬಸ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಿದ್ದು ಮಂಗಳೂರಿನ ಜನತೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…