Featured

ಮಂಗಳೂರು : ಸಿಟಿ ಬಸ್ ನಲ್ಲಿ ಭಾವಚಿತ್ರ ಬಿಡಿಸುವ ಮೂಲಕ ಭಾರತೀಯ ಸೈನ್ಯ ಹಾಗೂ ಧೀರ ಯೋಧ ಅಭಿನಂದನ್ ಗೆ ವಿಭಿನ್ನ ಗೌರವ – Vishwanews24

ಮಂಗಳೂರು : ಪಾಕಿಸ್ತಾನದ ಎಫ್ -16 ಯುದ್ದ ವಿಮಾನವನ್ನು ಹೊಡೆದುರುಳಿಸಿದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್.. ಈ ಹೆಸರು ಈಗ ದೇಶದ ಮೂಲೆ ಮೂಲೆಯಲ್ಲೂ ಕೇಳಿ ಬರುತ್ತಿದೆ. ಅಲ್ಲದೇ ವೀರ ಯೋಧನ ಸಾಹಸವನ್ನ ಎಲ್ಲೆಡೆ ಕೊಂಡಾಡಲಾಗುತ್ತಿದೆ. ಜೊತೆಗೆ ವಿವಿಧೆಡೆ ಅಭಿನಂದನ್​ಗೆ ವಿಭಿನ್ನವಾಗಿ ಗೌರವ ಸಲ್ಲಿಸಲಾಗುತ್ತಿದೆ. ಅದರಂತೆ ಮಂಗಳೂರಿನಲ್ಲಿ ಖಾಸಗಿ ಬಸ್ ನಲ್ಲಿ ಅಭಿನಂದನ್ ಅವರ ಬಾವಚಿತ್ರವನ್ನು ಬಿಡಿಸಿ ಭಾರತೀಯ ಸೇನೆ ಹಾಗೂ ಅಭಿನಂದನ್ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ.

ಪಾಕಿಸ್ಥಾನದ ಅತ್ಯಾಧುನಿಕ ಯುದ್ದ ವಿಮಾನ ಎಫ್ 16 ಅನ್ನು ಹೊಡೆದುರುಳಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ. ಹಾಗೆಯೆ ಮಂಗಳೂರಿನ ಖಾಸಗಿ ಸರ್ವಿಸ್ ಬಸ್ ವಿಭಿನ್ನ ರೀತಿಯಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ಗೆ ಗೌರವ ಸಲ್ಲಿಸುತ್ತಿದೆ.

ಸೈಂಟ್ ಆಂಟೋನಿ ಎಂಬ ಹೆಸರಿನ ರೂಟ್ ನಂ 14D ಬಸ್ ಇದಾಗಿದ್ದು ಮಂಗಳಾದೇವಿ – ಕಾವೂರು ರೂಟ್ ನಲ್ಲಿ ಈ ಬಸ್ ಸಂಚರಿಸುತ್ತದೆ.

ಈ ಬಸ್ ಗೆ ವಿಂಗ್ ಕಮಾಂಡರ್ ಅಭಿನಂದನ್ ಅವರ ಬಾವ ಚಿತ್ರ ಬಿಡಿಸಿ ಅದರಲ್ಲಿ ” We Salute Indian Army ” ಎಂದು ಬರೆಯುವ ಮೂಲಕ ಭಾರತೀಯ ಸೇನೆಗೆ ಗೌರವ ಸಲ್ಲಿಸಲಾಗಿದೆ.

ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಫೆಬ್ರವರಿ 14ರಂದು ಹುತಾತ್ಮರಾಗಿದ್ದರು. ಉಗ್ರರಿಗೆ ತಕ್ಕ ಪಾಠ ಕಲಿಸಲು ಭಾರತೀಯ ವಾಯು ಪಡೆಯು ಉಗ್ರರ ಮೂರು ನೆಲೆಗಳ ಫೆಬ್ರವರಿ 26ರಂದು ಏರ್ ಸ್ಟ್ರೈಕ್ ನಡೆಸಿ ಉಗ್ರರನ್ನು ನಾಶಗೊಳಿಸಿತ್ತು.

ನಂತರದ ದಿನ (ಫೆ.27ರಂದು) ಪಾಕಿಸ್ತಾನ ವಾಯು ಪಡೆಯ ಯುದ್ಧ ವಿಮಾನಗಳು ಗಡಿಯನ್ನು ದಾಟಿಬಂದು ಹಾರಾಟ ನಡೆಸಿದ್ದವು. ಈ ವೇಳೆ ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಭಾರತೀಯ ಪೈಲಟ್ ಅಭಿನಂದನ್ ಅವರು ಹೊಡೆದುರುಳಿಸಿದ್ದರು. ಈ ಹೋರಾಟದಲ್ಲಿ ತಮ್ಮ ಮಿಗ್ 21 ವಿಮಾನಕ್ಕೆ ಹಾನಿಯುಂಟಾದ ಹಿನ್ನಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದ ಅವರು, ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಹಾರಿದ್ದರು. ಆದರೆ ಅಭಿನಂದನ್ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದಿದ್ದು, ಬಂಧನಕ್ಕೆ ಒಳಗಾಗಿದ್ದರು. ನಂತರ ಭಾರತದ ರಾಜತಾಂತ್ರಿಕ ಎಚ್ಚರಿಕೆಗೆ ಮಣಿದ ಪಾಕಿಸ್ತಾನ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆಗೊಳಿಸಿತ್ತು.

ಪಾಕ್ ಸೈನ್ಯದ ಕೈಯಲ್ಲಿ ಬಂಧನಕ್ಕೊಳಗಾದ ಸಂದರ್ಭದಲ್ಲಿ ಭಾರತದ ಸೇನಾ ರಹಸ್ಯಗಳನ್ನು ಅರಿಯಲು ಪಾಕ್ ಅಭಿನಂದನ್ ಅವರಿಗೆ ಮಾನಸಿಕ ಹಾಗೂ ದೈಹಿಕ ಚಿತ್ರ ಹಿಂಸೆಯನ್ನು ನೀಡಿತ್ತು. ಆ ಹಿಂಸೆಗಳನ್ನೆಲ್ಲಾ ಸಹಿಸಿದ ಅಭಿನಂದನ್ ಅವರು ಯಾವುದೇ ಒಂದು ರಹಸ್ಯವನ್ನು ಪಾಕ್ ಸೇನೆಯ ಮುಂದೆ ಬಿಚ್ಚಿಟ್ಟಿಲ್ಲ.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

2 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

2 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

2 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

4 hours ago