ಮಂಗಳೂರು: ಸಿದ್ದರಾಮಯ್ಯನವರೆ, ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಯ್ಯೊ ಸಿದ್ದರಾಮಯ್ಯನವರೆ, ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದುಗಳು ಮರೆತಿಲ್ಲ. ನೀವು ಜಾತಿ- ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನೂ ಉಳಿದಿಲ್ಲ ಎಂದಿದ್ದಾರೆ.
ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ? ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಕೇಳಿದ್ದರು.
ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು, ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…